ಮಾದಕ ಸೇವನೆ ಜೀವನಕ್ಕೆ ಮಾರಕವಾಗಲಿದೆ: ತಹಶಿಲ್ದಾರ ಕಟ್ಟಿಮನಿ
Drug abuse will be fatal: Tahsildar Kattimani
ಮುದ್ದೇಬಿಹಾಳ 30: ಸಾಮಾನ್ಯವಾಗಿ ಮಾದಕ ಪದಾರ್ಥಗಳ ಸೇವನೆಯು ಹತ್ತಿರದ ಸ್ನೇಹಿತರ ಒತ್ತಾಯಕ್ಕೋ ಅಥವಾ ಆಮೀಷಕ್ಕೋ ಒಳಗಾಗಿ ಆರಂಭವಾಗಿ ನಂತರ ಚಟವಾಗಿ ಪರಿಣಮಿಸಿ ಮಾದಕ ಪದಾರ್ಥಗಳ ಸೇವನೆಯಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಗಂಭೀರ ತೀವ್ರತರವಾದ ಆರೋಗ್ಯ ಮತ್ತು ಮಾನಸಿಕ ಸಮಸ್ಯೆಗಳು ಎದುರಾಗಿ ಜೀವನ ಪರ್ಯಂತ ಒಂದಲ್ಲೊಂದು ರೀತಿಯಲ್ಲಿ ಕೆಟ್ಟವನಾಗಿ ಮನುಷ್ಯ ಗುಣಕ್ಕೆ ಮಾರಕನಾಗಿ ಬದುಕಬೇಕಾದ ಸ್ಥಿತಿ ಎದುರಾಗುತ್ತದೆ ಮಾದಕ ಸೇವನೆ ಜೀವನಕ್ಕೆ ಮಾರಕವಾಗಲಿದೆ ಎಂದು ತಹಶಿಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.
ತಾಲೂಕಾ ಆಡಳಿತ ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾದಕ ದ್ರವ್ಯ, ವಸ್ತುಗಳ ದ ಕುರಿತು ತಹಶಿಲ್ದಾರ ಕಚೇರಿಯಲ್ಲಿ ನಡೆದ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಯುವಕರು ಮಾದಕ ವಸ್ತುಗಳ ಸೇವೆಯಯಿಂದದಾಗಿ ಯುವಕ ದುಶ್ಚಟಗಳ ದಾಸರಾಗಿ ಇಡೀ ತಮ್ಮ ವಿದ್ಯಾರ್ಥಿ ಜೀವನದ ಜೊತೆಗೆ ತಮ್ಮ ವಯಕ್ತಿಕ ಬದುಕನ್ನೇ ಹಾಳುಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಯುವಕರ ಜಾಗೃತರಾಗಬೇಕು ಯಾವುದು ಕೆಟ್ಟದ್ದು ಯಾವೂದು ಒಳ್ಳೆಯದ್ದು ಎಂಬುದು ಅರ್ಥೈಸಿಕೊಳ್ಳಬೇಕು. ಪ್ರತಿಯೊಬ್ಬರೂ ಮೊದಲು ತಮ್ಮ ಜೀವನವನ್ನು ಆಯ್ದುಕೊಳ್ಳಿ, ಮಾದಕ ಪದಾರ್ಥಗಳನ್ನು ಅಲ್ಲ ಎಂಬುದನ್ನು ಅರಿಯಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವುಗಳು ಮಾದಕ ದ್ರವ್ಯ, ವಸ್ತುಗಳ ದುಶ್ಪರಿಣಾಮದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಎಲ್ಲರೂ ಸಹಕರಿಸುವುದರ ಜತೆಗೆ ತಾವೂ ಕೂಡ ಜಾಗೃತರಾಗಬೇಕು ಎಂದರು.
ಸಿಪಿಐ ಮೊಹಮ್ಮದ ಫಸಿಯುದ್ದೀನ ಅವರು ಮಾತನಾಡಿ ಮಾದಕ ಪದಾರ್ಥಗಳ ಸೇವನೆಯು ವ್ಯಕ್ತಿಯ ಜೀವನಕ್ಕೆ ಮಾರಕವಾಗಿದೆ ಕೋಟ್ಪಾ ಕಾಯ್ದೆಯನ್ವಯ ಶೈಕ್ಷಣಿಕ ಸಂಸ್ಥೆಗಳ 100 ವ್ಯಾಸದೊಳಗಿನ ಪ್ರದೇಶದಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನವನ್ನು ಮಾರಾಟ ಮಾಡುವಂತಿಲ್ಲ. ಈ ಕಾಯ್ದೆಗಳ ಮುಖ್ಯ ಉದ್ದೇಶ ಮಕ್ಕಳು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವುದನ್ನು ನಿಷೇಧಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಈ ಗಾಗಲೇ ಕಾನೂನು ಬಾಹಿರ ಮಾರಾಟ ಮಾಡುವ ಬಂಧಿಸಿ ಪ್ರಕರಣ ದಾಖಲಿಸಲಾಗುವುದು ಈ ಬಗ್ಗೆ ಹೆಚ್ಚು ಯುವಕ ಯುವತಿಯ ಜಾಗೃತರಾಗಬೇಕು ಎಂದರು.
ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ, ಸತೀಶ ತಿವಾರಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಸಾವಳಗಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕಂದಾಯ ನೀರೀಕ್ಷಕ ಡಿ ಎಸ್ ತಳವಾರ, ಶಿಕ್ಷಕ ಟಿ ಡಿ ಲಮಾಣಿ, ಬಿ ಆರ್ ಸಿ ಗುಂಡು ಲಮಾಣಿ ಸೇರಿದಂತೆ ಪೋಲಿಸ್ ಸಿಬ್ಬಂದಿವರ್ಗ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 