ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನ: ಬೃಹತ್ ಜಾತಾ
Drug prohibition awareness campaign:Rally
ತಾಳಿಕೋಟಿ 27: ವಿಜಯಪುರ ಜಿಲ್ಲಾ ಪೊಲೀಸ್, ಬಸವನ ಬಾಗೇವಾಡಿ ಉಪವಿಭಾಗ ಹಾಗೂ ತಾಳಿಕೋಟಿ ಪೊಲೀಸ್ ಠಾಣೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನದ ಅಂಗವಾಗಿ ಗುರುವಾರ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾತಾ ಹಮ್ಮಿಕೊಳ್ಳಲಾಯಿತು.
ಜಾತಾಕ್ಕೆ ತಹಸಿಲ್ದಾರ್ ಡಾ.ವಿನಯಾ ಹೂಗಾರ ಚಾಲನೆ ನೀಡಿದರು. ಪಟ್ಟಣದ ಶರಣಮುತ್ಯಾ ದೇವಸ್ಥಾನದಿಂದ ಆರಂಭವಾದ ಜಾತಾದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಯಲ್ಲಿ ಹ್ಯಾಂಡ್ ಪೋಸ್ಟರ್ಸ್ಗಳನ್ನು ಹಿಡಿದುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಖಾಸ್ಗತೇಶ್ವರ ಸಭಾಭವನಕ್ಕೆ ತಲುಪಿದರು. ಅಲ್ಲಿ ವೇದಿಕೆ ಕಾರ್ಯಕ್ರಮ ಜರಗಿತು.
ಶಿಕ್ಷಕ ಗುಂಡೂರಾವ ಧನಪಾಲ ಅವರು ಮಾತನಾಡಿ ನಶೆ ತರುವ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಶಾಂತಿ ನೆಮ್ಮದಿ ಕಳೆದುಕೊಳ್ಳುತ್ತಾನೆ. ಆದ್ದರಿಂದ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ಪಿಎಸ್ಐ ರಾಮನಗೌಡ ಸಂಕನಾಳ, (ಅ.ವಿ.)ಆರ್.ಎಸ್.ಭಂಗಿ, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 