ಕಂಠಪೂರ್ತಿ ಕುಡಿದ ವೈದ್ಯನಿಂದ ಹೃದ್ರೋಗಿಗೆ ಚಿಕಿತ್ಸೆ
Drunk doctor treats heart patient
ಬೆಳಗಾವಿ 22: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಬೆಳಗಾವಿ ಜಿಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ನಡೆದುಕೊಂಡಿರುವ ರೀತಿಯನ್ನು ನೋಡಿದರೆ, ಇವರ ಬಳಿ ಚಿಕಿತ್ಸೆ ಪಡೆಯುವವರ ಸ್ಥಿತಿ ಗೋವಿಂದ ಎನ್ನುವಂತಾಗಿದೆ.
ಬೆಳಗಾವಿ
ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ
ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಫುಲ್ ಕುಡಿದ ಮತ್ತಿನಲ್ಲಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ
ರೋಗಿಯ ತಪಾಸಣೆ ನಡೆಸಿದ್ದಾರೆ. ಸರಿಯಾಗಿ ನಿಲ್ಲುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿದ್ದವರನ್ನು ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ
ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು
ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ
ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 