ಕಂಠಪೂರ್ತಿ ಕುಡಿದ ವೈದ್ಯನಿಂದ ಹೃದ್ರೋಗಿಗೆ ಚಿಕಿತ್ಸೆ
Drunk doctor treats heart patient
ಬೆಳಗಾವಿ 22: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಬೆಳಗಾವಿ ಜಿಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ನಡೆದುಕೊಂಡಿರುವ ರೀತಿಯನ್ನು ನೋಡಿದರೆ, ಇವರ ಬಳಿ ಚಿಕಿತ್ಸೆ ಪಡೆಯುವವರ ಸ್ಥಿತಿ ಗೋವಿಂದ ಎನ್ನುವಂತಾಗಿದೆ.
ಬೆಳಗಾವಿ
ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ
ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಫುಲ್ ಕುಡಿದ ಮತ್ತಿನಲ್ಲಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ
ರೋಗಿಯ ತಪಾಸಣೆ ನಡೆಸಿದ್ದಾರೆ. ಸರಿಯಾಗಿ ನಿಲ್ಲುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿದ್ದವರನ್ನು ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ
ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು
ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ
ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 