ಕಂಠಪೂರ್ತಿ ಕುಡಿದ ವೈದ್ಯನಿಂದ ಹೃದ್ರೋಗಿಗೆ ಚಿಕಿತ್ಸೆ
Drunk doctor treats heart patient
ಬೆಳಗಾವಿ 22: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಬೆಳಗಾವಿ ಜಿಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ನಡೆದುಕೊಂಡಿರುವ ರೀತಿಯನ್ನು ನೋಡಿದರೆ, ಇವರ ಬಳಿ ಚಿಕಿತ್ಸೆ ಪಡೆಯುವವರ ಸ್ಥಿತಿ ಗೋವಿಂದ ಎನ್ನುವಂತಾಗಿದೆ.
ಬೆಳಗಾವಿ
ಜಿಲ್ಲೆಯ ಸವದತ್ತಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಕಂಠಪೂರ್ತಿ ಕುಡಿದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯ ತಪಾಸಣೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳೆದ
ರಾತ್ರಿ ಹೃದಯ ಸಂಬಂಧಿ ಕಾಯಿಲೆಯಿಂದ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಫುಲ್ ಕುಡಿದ ಮತ್ತಿನಲ್ಲಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಸುರೇಶ್ ಹಿತ್ತಲಮನಿ
ರೋಗಿಯ ತಪಾಸಣೆ ನಡೆಸಿದ್ದಾರೆ. ಸರಿಯಾಗಿ ನಿಲ್ಲುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿದ್ದವರನ್ನು ರೋಗಿಯ ಸಂಬಂಧಿಕರು ತಪಾಸಣೆ ನಡೆಸದಂತೆ ಹೇಳಿದರೂ ಕೇಳದೇ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ
ರೋಗಿ ಸಂಬಂಧಿಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ನರ್ಸ್ ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಹಲವಾರು
ಬಾರಿ ಜನಪ್ರತಿನಿಧಿಗಳ ಬಳಿ ದೂರು ನೀಡಿದರೂ ಸಹ ಪರಿಸ್ಥಿತಿಯಲ್ಲಿ ಯಾವುದೇ
ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 