ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಾಲುವೆಗೆ ನೀರು ಹರಿಸಲು ಒತ್ತಾಯ
Due to the lack of monsoon rains, there is an urge to release water into the canal
ರಾಣೇಬೆನ್ನೂರು 8 : ರೈತರಲ್ಲಿ ಆಸೆ ಹುಟ್ಟಿಸಿ ಬಿತ್ತನೆ ಕಾರ್ಯ ಮುಗಿದ ಮೇಲೆ ಮುಂಗಾರು ಮಳೆ ಕೈಕೊಟ್ಟಿದೆ, ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿ ಜಲಾಶಗಳು ಭರ್ತಿಯಾಗಿರುವುದರಿಂದ ಈ ಭಾಗದಲ್ಲಿ ಮಳೆಯನ್ನೆ ನಂಬಿ ಬಿತ್ತನೆ ಮಾಡಿದ ರೈತ ಈಗ ಆಕಾಶದ ಕಡೆ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭೂಮಿ ಹಸಿ ಇದ್ದಾಗ ಬಿತ್ತಿದ ಪರಿಣಾಮ ಬೀಜಗಳು ಮೊಳಕೆಯೊಡೆದು ಬಿಸಿಲಿಗೆ ಬಾಯಿ ಬಿಡುತ್ತಿವೆ. ದುಬಾರಿ ವೆಚ್ಚದ ರಾಸಾಯನಿಕ ಗೊಬ್ಬರ, ಬೀಜ ಖರೀದಿಸಿದ ರೈತ ಕಾಂಗಾಲಾಗಿದ್ದಾನೆ ಕೂಡಲೇ ಅಪ್ಪರತುಂಗಾ ಯೋಜನೆಯ ಮುಖ್ಯ ಕಾಲುವೆಗೆ ನೀರಾವರಿ ಇಲಾಖೆಯ ಅಧಿಕಾರಿಗಳು ವರ್ಷದ ನೀರು ಬಿಡುವ ವಾಡಿಕೆಯ ದಿನಾಂಕಕ್ಕೆ ಕಾಯದೆ ಇಂದೇ ಕಾಲುವೆಗೆ ನೀರು ಹರಿಸಿ ಒಣಗುತ್ತಿರುವ ಬೆಳೆಗಳಿಗೆ ನೀರುಣಿಸುವ ಕಾರ್ಯವನ್ನು ಮಾಡಬೇಕು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ತುರ್ತು ಗಮನಹರಿಸಬೇಂದು ರೈತ ಮುಖಂಡ ರವೀಂದ್ರಗೌಡ ಎಫ್ ಪಾಟೀಲ ಸಚಿವರು ಮತ್ತು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 