ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
E-KYC mandatory for NREGA workers: EO Cheluvaiah
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
ದೇವರಹಿಪ್ಪರಗಿ 18: ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ಗಳಲ್ಲಿರುವ ಎಲ್ಲಾ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ತಿಳಿಸಿದ್ದಾರೆ.ತಾಲೂಕಿನ ಚಿಕ್ಕರೂಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ಶನಿವಾರದಂದು ಇ-ಕೆವೈಸಿ ಅಭಿವ ಅಭಿಯಾನದಲ್ಲಿ ಮಾತನಾಡಿದರು. ನಂತರ ಗ್ರಾಮದ ಸಂತೆಯಲ್ಲಿ ಪಿಡಿಒ ಶಿವಾನಂದ ಮೂಲಿಮನಿ ಹಾಗೂ ಐಇಸಿ ಸಂಯೋಜಕ ಸಿದ್ದು ಕಾಂಬಳೆ ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡುವ ಮೂಲಕ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 14 ಗ್ರಾಪಂ ಗಳ ಪೈಕಿ 16995 ಸಕ್ರಿಯ ಉದ್ಯೋಗ ಕಾರ್ಡುಗಳಿದ್ದು.
ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಮಣೂರ-2387, ಜಾಲವಾದ-1879 ಹಾಗೂ ಹುಣಶ್ಯಾಳ-1708 ಉದ್ಯೋಗ ಕಾರ್ಡಗಳಿದ್ದು. ಬಾಕಿ ಇರುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಹಾಗೂ ಪಿಡಿಓ ಅವರು ಹೆಚ್ಚಿನ ಗಮನ ನೀಡಬೇಕು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ಶಾಂತಗೌಡ ನ್ಯಾಮಣ್ಣವರ ಅವರು ಮಾತನಾಡಿ, ಮನರೇಗಾ ಯೋಜನೆ ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ. ಕೂಲಿ ಕಾರ್ಮಿಕರು ತಮ್ಮ ಕಾರ್ಡುಗಳ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 