ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಿಗಳಿಗೆ ಇ-ಕೆವೈಸಿ ಕಡ್ಡಾಯ
E-KYC mandatory for National Rural Employment Guarantee Scheme employees
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಿಗಳಿಗೆ ಇ-ಕೆವೈಸಿ ಕಡ್ಡಾಯ
ಗದಗ 08: ಮಹಾತ್ಮಗಾಂಧಿ ಉದ್ಯೋಗ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗಗಳಿಗೆ ಎನ್ಎಂಎಂಎಸ್ ಆ್ಯಪ್ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು ಸಮರೋಪಾದಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.ಗದಗ ತಾಲೂಕು ಪಂಚಾಯತಿಯಿಂದ ಬುಧವಾರ ಗೂಗಲ್ ಮೀಟ್ ಮೂಲಕ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 27 ಗ್ರಾಮ ಪಂಚಾಯತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ ಸಕ್ರಿಯ ಉದ್ಯೋಗ ಚೀಟಿಗಳಿಗೆ ಇ- ಕೆವೈಸಿ ಮಾಡುವಂತೆ ಆಯುಕ್ತಾಲಯದಿಂದ ಆದೇಶ ಬಂದಿದೆ. ಅದರಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು.
ಜೊತೆಗೆ ಇ- ಕೆವೈಸಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಸಕ್ರಿಯವಾಗಿರುವ ಜಾಬ್ಕಾರ್ಡ್ಗಳಿಗೆ ಇ-ಕೆವೈಸಿ ಮಾಡಿಸುವಂತೆ ಸೂಚಿಸಿದರು.ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ ಅವರು ಮಾತನಾಡಿ, ಗದಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಗ್ರಾಪಂಗಳು ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಸಕ್ರಿಯ ಉದ್ಯೋಗ ಚೀಟಿಗಳು ಗದಗ ತಾಲೂಕಿನಲ್ಲಿವೇ. ಗ್ರಾಮ ಪಂಚಾಯತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್ಟಿ, ಡಿಇಒ ಮತ್ತು ಕಾಯಕ ಬಂಧುಗಳನ್ನು ಸಕ್ರಿಯವಾಗಿ ಇ-ಕೆವೈಸಿ ಕಾರ್ಯದಲ್ಲಿ ತೊಡಗಿಸಿಕೊಂಡು ಪೂರ್ಣಗೊಳಿಸುವಂತೆ ತಿಳಿಸಿದರು.ಕೋಟ್ಗದಗ ತಾಲೂಕು ವ್ಯಾಪ್ತಿಯ 27 ಗ್ರಾಮ ಪಂಚಾಯತಿಗಳ ಎಲ್ಲ ನೋಂದಾಯಿತ ಸಕ್ರಿಯ ಕೂಲಿಕಾರರು ಇ-ಕೆವೈಸಿ ಮೂಲಕ ಮಾಹಿತಿ ನವಿ?ಕರಣ ಮಾಡಿಕೊಳ್ಳಲು ಅ. 31ರ ಒಳಗಾಗಿ ಮಾಡಿಸುವುದು ಕಡ್ಡಾಯವಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 