ಇ-ಆಸ್ತಿ ನೋಂದಣಿಗೆ ಕಡಿಮೆ ದಾಖಲಾತಿಗಳನ್ನು ಪಡೆಯಬೇಕು : ವಿಜಯ್ ಪಾಟೀಲ
E-Property Registration Needs Fewer Entries : Vijay Patil
ಬೆಳಗಾವಿ 09: ಇ-ಆಸ್ತಿ ನೋಂದಣಿಗಾಗಿ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಸಂಬಂಧವಿರದ ದಾಖಲಾತಿಗಳ ಬೇಡಿಕೆಯನ್ನು ಮಾಡದೇ, ಕಡಿಮೆ ದಾಖಲಾತಿಗಳನ್ನು ಪಡೆದು ಇ-ಆಸ್ತಿ ನೋಂದಣಿ ಮಾಡಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಇಂದಿಲ್ಲಿ ಒತ್ತಾಯಿಸಿದರು.
ಬುಧವಾರ ನಗರದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇ-ಆಸ್ತಿ ಇದು ಮಹತ್ವದ ಪ್ರಕ್ರಿಯೆಯಾಗಿದೆ. ಬೆಂಗಳೂರಿನಲ್ಲಿ ಕೇವಲ 4 ದಾಖಲೆಗಳನ್ನು ಕೇಳುತ್ತಿರುವಾಗ ಬೆಳಗಾವಿ ಪಾಲಿಕೆಯಲ್ಲಿ ಹತ್ತಾರು ದಾಖಲೆಗಳನ್ನು ಕೇಳುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಕಿರಿ ಕಿರಿಯಾಗುತ್ತಿದೆ. ಸಿಟಿಎಸ್ ಇದ್ದವರಿಗೆ ಇ-ಆಸ್ತಿ ನೀಡಬೇಕು. ನೂರಾರು ವರ್ಷಗಳ ಕಾಲ ಹಳೆಯದಾದ ಸಾಲ ಬಾಧ್ಯತಾ ಪ್ರಮಾಣಪತ್ರ ನೀಡುವುದು ಕಷ್ಟಕರ. ಸಾಲ ಬಾಧ್ಯತಾ ಪ್ರಮಾಣಪತ್ರಕ್ಕೂ ಮತ್ತು ಇ- ಆಸ್ತಿಗೆ ಯಾವುದೇ ಸಂಬಂಧವಿಲ್ಲ ಎಂದರು.
ಇನ್ನು ಬಿ-ಖಾತಾ ನೋಂದಣಿ ಕುರಿತು ಮೊದಲೂ ಜನರಿಗೆ ಸ್ಪಷ್ಟತೆಯನ್ನು ನೀಡಬೇಕು. ಜಿಲ್ಲಾಧಿಕಾರಿಗಳು ಮತ್ತು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಈ ಕುರಿತು ಮಾಧ್ಯಮಗೋಷ್ಟಿಯನ್ನು ನಡೆಸಿ ಮಾಹಿತಿಯನ್ನು ನೀಡಬೇಕು. ಎರಡುವರೆ ಲಕ್ಷ ಆಸ್ತಿಗಳಿರುವುದಾಗಿ ಮಹಾನಗರ ಪಾಲಿಕೆಯೇ ಮಾಹಿತಿ ನೀಡುತ್ತಿರುವಾಗ, ದಾಖಲಾತಿಗಳನ್ನು ಕಡಿಮೆ ಪಡೆದು, ಇ- ಆಸ್ತಿಯ ನೋಂದಣಿ ಹೆಚ್ಚಾಗಬೇಕು. ಸಿ.ಟಿ.ಎಸ್. ಆಧಾರದ ಮೇಲೆ ಮನೆ ಮನೆಗೆ ತೆರಳಿ ಇ-ಆಸ್ತಿಯನ್ನು ನೋಂದಾಯಿಸಬೇಕು ಎಂದು ಆಗ್ರಹಿಸಿದರು.
ಇಂದಿನ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯದರ್ಶಿ ಪವನ್ ಕುಮಾರ್, ಸೋನಿಯಾ ಡಿಸೋಜಾ ದಕ್ಷಿಣ ಜಿಲ್ಲಾದ್ಯಕ್ಷ ಸುದೀಪ್ ನೇಸರಕರ, ಯುವ ಘಟಕದ ಅಧ್ಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 