ಇ-ಆಸ್ತಿ ನೋಂದಣಿಗೆ ಕಡಿಮೆ ದಾಖಲಾತಿಗಳನ್ನು ಪಡೆಯಬೇಕು : ವಿಜಯ್ ಪಾಟೀಲ
E-Property Registration Needs Fewer Entries : Vijay Patil
ಬೆಳಗಾವಿ 09: ಇ-ಆಸ್ತಿ ನೋಂದಣಿಗಾಗಿ ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ ಸಂಬಂಧವಿರದ ದಾಖಲಾತಿಗಳ ಬೇಡಿಕೆಯನ್ನು ಮಾಡದೇ, ಕಡಿಮೆ ದಾಖಲಾತಿಗಳನ್ನು ಪಡೆದು ಇ-ಆಸ್ತಿ ನೋಂದಣಿ ಮಾಡಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಇಂದಿಲ್ಲಿ ಒತ್ತಾಯಿಸಿದರು.
ಬುಧವಾರ ನಗರದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇ-ಆಸ್ತಿ ಇದು ಮಹತ್ವದ ಪ್ರಕ್ರಿಯೆಯಾಗಿದೆ. ಬೆಂಗಳೂರಿನಲ್ಲಿ ಕೇವಲ 4 ದಾಖಲೆಗಳನ್ನು ಕೇಳುತ್ತಿರುವಾಗ ಬೆಳಗಾವಿ ಪಾಲಿಕೆಯಲ್ಲಿ ಹತ್ತಾರು ದಾಖಲೆಗಳನ್ನು ಕೇಳುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಕಿರಿ ಕಿರಿಯಾಗುತ್ತಿದೆ. ಸಿಟಿಎಸ್ ಇದ್ದವರಿಗೆ ಇ-ಆಸ್ತಿ ನೀಡಬೇಕು. ನೂರಾರು ವರ್ಷಗಳ ಕಾಲ ಹಳೆಯದಾದ ಸಾಲ ಬಾಧ್ಯತಾ ಪ್ರಮಾಣಪತ್ರ ನೀಡುವುದು ಕಷ್ಟಕರ. ಸಾಲ ಬಾಧ್ಯತಾ ಪ್ರಮಾಣಪತ್ರಕ್ಕೂ ಮತ್ತು ಇ- ಆಸ್ತಿಗೆ ಯಾವುದೇ ಸಂಬಂಧವಿಲ್ಲ ಎಂದರು.
ಇನ್ನು ಬಿ-ಖಾತಾ ನೋಂದಣಿ ಕುರಿತು ಮೊದಲೂ ಜನರಿಗೆ ಸ್ಪಷ್ಟತೆಯನ್ನು ನೀಡಬೇಕು. ಜಿಲ್ಲಾಧಿಕಾರಿಗಳು ಮತ್ತು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಈ ಕುರಿತು ಮಾಧ್ಯಮಗೋಷ್ಟಿಯನ್ನು ನಡೆಸಿ ಮಾಹಿತಿಯನ್ನು ನೀಡಬೇಕು. ಎರಡುವರೆ ಲಕ್ಷ ಆಸ್ತಿಗಳಿರುವುದಾಗಿ ಮಹಾನಗರ ಪಾಲಿಕೆಯೇ ಮಾಹಿತಿ ನೀಡುತ್ತಿರುವಾಗ, ದಾಖಲಾತಿಗಳನ್ನು ಕಡಿಮೆ ಪಡೆದು, ಇ- ಆಸ್ತಿಯ ನೋಂದಣಿ ಹೆಚ್ಚಾಗಬೇಕು. ಸಿ.ಟಿ.ಎಸ್. ಆಧಾರದ ಮೇಲೆ ಮನೆ ಮನೆಗೆ ತೆರಳಿ ಇ-ಆಸ್ತಿಯನ್ನು ನೋಂದಾಯಿಸಬೇಕು ಎಂದು ಆಗ್ರಹಿಸಿದರು.
ಇಂದಿನ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯದರ್ಶಿ ಪವನ್ ಕುಮಾರ್, ಸೋನಿಯಾ ಡಿಸೋಜಾ ದಕ್ಷಿಣ ಜಿಲ್ಲಾದ್ಯಕ್ಷ ಸುದೀಪ್ ನೇಸರಕರ, ಯುವ ಘಟಕದ ಅಧ್ಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 