ಗ್ರಹಣ: ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬಗಳು
ಚಿಕ್ಕಮಗಳೂರು: ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ ಹೇಳಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ರಾತ್ರೋರಾತ್ರಿ ಗ್ರಾಮವನ್ನೇ ತೊರೆದು ಹೊಲಸೆ ಹೋಗಿವೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ.
ಕೇರಳ ಮೂಲದ ಜ್ಯೋತಿಷಿಯೊಬ್ಬ ಈ ರೀತಿ ಹೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ತಾವು ಮತ್ತೆಂದು ಈ ಗ್ರಾಮಕ್ಕೆ ಬರದಿರಲು ಗ್ರಾಮಸ್ಥರು ನಿರ್ಣಯಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 