ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ ಅತ್ಯಗತ್ಯ: ಜಾಬಶೆಟ್ಟಿ
Eco-friendly lifestyle is essential for future generations: Jobashetti
ಧಾರವಾಡ 07: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಹಾಗೂ ಸರಕಾರಿ ಪ್ರೌಢ ಶಾಲೆ, ವೀರಾಪೂರ ಇವರ ಆಶ್ರಯದಲ್ಲಿ ನಡೆದ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಸರ ಸ್ನೇಹಿ ಜೈವಿಕ ತಂತ್ರಜ್ಞಾನ ಮತ್ತು ಸೌರ ವಿದ್ಯುತ್ ಶಕ್ತಿ ಉತ್ಪಾದನೆ ತಂತ್ರಜ್ಞಾನಗಳು ಕುರಿತು ಸರಕಾರಿ ಪ್ರೌಢಶಾಲೆ ವೀರಾಪುರದ ಸಹ್ಯಾದ್ರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮವನ್ನು ಮುಖ್ಯಾಧ್ಯಾಪಕಿ ಮಂಗಳಗೌರಿ ಬಡಿಗೇರ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ತ್ಯಾಜ್ಯ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಅವಶ್ಯಕವಾಗಿದೆ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ, ವಿಷಮುಕ್ತ ಆಹಾರ ಉತ್ಪಾದನೆ, ಶುದ್ಧ ನೀರು, ಶುದ್ಧ ಗಾಳಿ ದೊರೆಯುವಂತೆ ಇಂದಿನ ಮಕ್ಕಳು ಭಾಷ್ಯ ಬರೆಯಬೇಕಾಗಿದೆ, ಪಾರಂಪರಿಕ ಹಾಗೂ ನಂದಿ ಆಧಾರಿತ ಕೃಷಿಯ ಪುನರುತ್ಥಾನಕ್ಕಾಗಿ ನಾವೆಲ್ಲರೂ ಕಂಕಣ ಬದ್ಧರಾಗಬೇಕಿದೆಯೆಂದು ಖ್ಯಾತ ಪರಿಸರವಾದಿ ಭಾಲಚಂದ್ರ ಜಾಬಶೆಟ್ಟಿಯವರು ನೀಡಿದ ಉಪನ್ಯಾಸದ ಮುಖ್ಯಾಂಶಗಳಲ್ಲೊಂದಾಗಿತ್ತು. ಸೌರ ವಿದ್ಯುಚ್ಛಕ್ತಿ ಉತ್ಪಾದನೆಯಿಂದ ದೊರೆಯುವ ಲಾಭಗಳ ಕುರಿತು ವಿವಿಧ ಆಯಾಮಗಳಲ್ಲಿ ವಿಷಯ ಮಂಡಿಸಿದರು.
ಎಸ್.ಡಿ.ಎಮ್.ಸಿ ಅಧ್ಯಕ್ಷ ಈರನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು, ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹಾಂತೇಶ ನರೇಗಲ್ಲ ಸರ್ ರವರು ಅತಿಥಿಗಳನ್ನು ಪರಿಚಯಿಸಿದರು, ವಿಜ್ಞಾನ ಶಿಕ್ಷಕಿ ಸ್ಮಿತಾ ವಡಗಾವೆ ಕಾರ್ಯಕ್ರಮ ನಿರೂಪಿಸಿದರು, ಡಾ.ಕೆ ಪರಿಮಳಾ ಸ್ವಾಗತಿಸಿದರು. ಉಮಾದೇವಿ ಪಾಟೀಲ ವಂದಿಸಿದರು.ಸುರೇಶ ಮುಗಳಿ, ಸುವರ್ಣ ಪಾಟೀಲ, ವಾಯ್ ಎಸ್ ಬೆಣ್ಣಿ ಹಾಗೂ ಗುರುಬಳಗ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 