ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬಗಳ ಆರ್ಥಿಕ ಸಬಲೀಕರಣ: ವೀರಯ್ಯ ಮಠಪತಿ
Economic empowerment of families through the Gruha Lakshmi scheme: Veerayya Mathapathi
ಶಿರಹಟ್ಟಿ, ಜು.21: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರು ಹಾಗೂ ಕುಟುಂಬಗಳ ಆರ್ಥಿಕ ಸ್ವಾವಲಂಬನೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಹೇಳಿದರು. ಮಾಗಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ದಿನಾಚರಣೆ ಆಚರಿಸಲಾಗುತ್ತಿದೆ. ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬಿ ಜೀವನ ನಡೆಸುವಂತಾಗಿದ್ದು, ಇನ್ನಷ್ಟು ಮಹಿಳೆಯರು ಉದ್ಯಮ ಆರಂಭಿಸಿ ಇತರರಿಗೂ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಆಶಿಸಿದರು. ಈ ಸಂದರ್ಭದಲ್ಲಿ ಖಋ ಪ್ರಕ್ರಿಯೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಃಐಓಗಳಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ದ್ಯಾಮಣ್ಣ ಸಾಸಳ್ಳಿ, ಶ್ರೀಮತಿ ಶೈನಾಜ್ ಬೇಗಂ ಭುವಾಜಿ, ಶ್ರೀಮತಿ ಲಲಿತವ್ವ ಪಾಟೀಲ, ಕೆಡಿಪಿ ಸದಸ್ಯ ಪವನ್ ಇಳಿಗೇರ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಮೃತ್ಯುಂಜಯ ಗುಡ್ಡದಾನವರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಎಸ್. ವೈ. ಕುಂಬಾರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಎನ್ಆರ್ಎಲ್ಎಂ ಸಿಬ್ಬಂದಿ ಮತ್ತು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಉಪಸ್ಥಿತರಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 