ಶೈಕ್ಷಣಿಕ ಸಾಧಕರಿಗೆ ಪ್ರೋತ್ಸಾಹ ಅಗತ್ಯ: ಕೆ.ಜಿ. ಮೋಹನ್
Educational achievers need encouragement: K.G. Mohan
ರಾಣೇಬೆನ್ನೂರು 27: ಯಾವುದೇ ಪ್ರತಿಭೆಗಳಿಗೆ ಮತ್ತು ಅವರು ಮಾಡಿದ ವಿಶೇಷ ಸಾಧನೆಗೆ ಪ್ರೋತ್ಸಾಹ ನೀಡಿದಾಗ ಮಾತ್ರ ಅವರಲ್ಲಿರುವ ಆಂತರಿಕ ಶಕ್ತಿ ಮತ್ತಷ್ಟು ಹೆಚ್ಚಳವಾಗಲು ಮತ್ತು ಸಾಧನೆ ಮಾಡಲು ಸಾಧ್ಯವಾಗುವುದು ಎಂದು ಸ್ನೇಹ ದೀಪ ಅಂಧ ಅಂಗವಿಕಲರ ಸಂಸ್ಥೆಯ ಧರ್ಮದರ್ಶಿ ಕೆ.ಜಿ. ಮೋಹನ್ ಹೇಳಿದರು.
ಅವರು ಇಲ್ಲಿನ ಶ್ರೀರಾಮನಗರದಲ್ಲಿರುವ ಸಂಸ್ಥೆಯ ಸಭಾಭವನದಲ್ಲಿ ನಡೆದ, 9ನೇ ವಾರ್ಷಿಕೋತ್ಸವ, ದ್ವಿತೀಯ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳ ಅಭಿನಂದನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಪೂರ್ಣ ಸೇವೆಯೇ ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದ್ದು, ಅದರ ಬೆಳವಣಿಗೆ ಮತ್ತು ಸಾಧನೆಗೆ ನಗರದ ನಾಗರಿಕರ ತುಂಬು ಸಹಕಾರದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪವನ್ ಕುಮಾರ ಮಲ್ಲಾಡದ, ಚಿಕ್ಕೋಡಿಯ ಪ್ರಾಚಾರ್ಯ ಪ್ರಕಾಶ ಗಂಗಾ, ರೋಟರಿ ಅಧ್ಯಕ್ಷ ಬಿ.ಜಿ. ಹಿರೇಮಠ, ಇನ್ನರ್ ವ್ಹಿಲ್ ಅಧ್ಯಕ್ಷ ಡಾ, ದೀಪಾಲಿ ಪುನೀತ್, ಸಂಸ್ಥೆಯ ವರದರಾಜು, ವರ್ತಕ ಜಿ.ಜಿ. ಹೊಟ್ಟಿಗೌಡ್ರ, ಸುಧೀರ್ ಕುರುವತ್ತಿ, ವಸಂತ ಹುಲ್ಲತ್ತಿ, ಸಂಜನಾ ಕುರುವತ್ತಿ ಪರಮೇಶಪ್ಪ ಮುದಿಗೌಡರ, ಸುಮಾ ಹೊಟ್ಟಿಗೌಡ್ರ ಸೇರಿದಂತೆ ಮತ್ತಿತರ ಗಣ್ಯರು ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 