ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಪಠಾಣ
Educational progress is crucial in a competitive world: MLA Pathana
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಪಠಾಣ
ಶಿಗ್ಗಾವಿ 29: ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ ಪಾತ್ರವಹಿಸಿದೆ ವಿದ್ಯಾವಂತ ವ್ಯಕ್ತಿ ತನ್ನ ಕುಟುಂಬವನ್ನು ಶಿಕ್ಷಣದಿಂದಲೇ ರಕ್ಷಿಸಿಕೊಳ್ಳುತ್ತಾನೆ ಎಂದು ಶಾಸಕ ಯಾಸೀರಖಾನ ಪಠಾಣ ಹೇಳಿದರು. ತಾಲೂಕಿನ ದುಂಡಶಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ನೂತನ ಎರಡು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರುಶಿಗ್ಗಾವಿಯ ಮಾಜಿ ಶಾಸಕ ದಿ.ನೀಲಕಂಠಗೌಡ್ರ ಪಾಟೀಲ 1986 ನೇ ಇಸವಿಯಲ್ಲಿ ಈ ಶಾಲೆಯನ್ನು ತೆರೆಯುವ ಮೂಲಕ ಅವರ ಅಧಿಕಾರಾವಧಿಯಲ್ಲಿ ದುಂಡಶಿ ಗ್ರಾಮಕ್ಕೆ ಶಾಲೆ ಪ್ರಮುಖ ಹೆಜ್ಜೆ ಗುರುತು ಆಗಿತ್ತು ಅಲ್ಲದೇ ಶಿಕ್ಷಣವು ಜ್ಞಾನ, ಕೌಶಲ್ಯ, ತಂತ್ರ ಇನ್ನಿತರ ಮಾಹಿತ ಜೊತೆಗೆ ಸಮಾಜದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡುವ ಸಾಮರ್ಥ್ಯ ಕಲ್ಪಿಸಲಿದೆ. ಹೀಗಾಗಿ ಪ್ರತಿಯೊಬ್ಬರು ಶಿಕ್ಷಣವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಹನುಮರೆಡ್ಡಿ ನಡುವಿನಮನಿ, ಅಣ್ಣಪ್ಪ ಲಮಾಣಿ, ಆನಂದ ಲಮಾಣಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 