ರೈತರ ಆರ್ಥಿಕ ಭಲವರ್ಧನೆಗೆ ಶ್ರಮಿಸಬೇಕು : ಶ್ರೀಕಾಂತ ದುಂಡಿಗೌಡ್ರ
Efforts should be made for the economic upliftment of farmers: Srikanth Dundigowdra
ರೈತರ ಆರ್ಥಿಕ ಭಲವರ್ಧನೆಗೆ ಶ್ರಮಿಸಬೇಕು : ಶ್ರೀಕಾಂತ ದುಂಡಿಗೌಡ್ರ
ಲೋಕದರ್ಶನ ವರದಿ
ಶಿಗ್ಗಾವಿ 18 : ಹೆಚ್ಚಿನ ರೀತಿಯಲ್ಲಿ ರೈತರಿಗೆ ನೆರವು ಕೊಡಿಸುವಂತಹ ಕೆಲಸಗಳನ್ನ ನೂತನ ಕೆಎಂಎಫ್ ನಿರ್ದೇಶಕರು ಮಾಡಿ ರೈತರ ಆರ್ಥಿಕ ಭಲವರ್ಧನೆಗೆ ಶ್ರಮಿಸಬೇಕು ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ತಾಲೂಕಿನ ಗಂಗೇಬಾವಿ ರೆಸಾರ್ಟನಲ್ಲಿ ಮಾಜಿ ಜಿಲ್ಲಾ ಪಂಚಾಯತಿಯ ಸದಸ್ಯ ಶಶಿಧರ ಹೊನ್ನಣ್ಣವರ ಬಳಗದ ವತಿಯಿಂದ ಹಮ್ಮಿಕೊಂಡ ನೂತನ ಶಿಗ್ಗಾವಿ ಹಾಗೂ ಸವಣೂರ ತಾಲೂಕಿನ ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೆಎಂಎಫ್) ನಿರ್ಧೇಶಕರಾದ ಶಶಿಧರ ಯಲಿಗಾರ ಹಾಗೂ ತಿಪ್ಪಣ್ಣ ಸಾತಣ್ಣವರ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ರೈತರ ಉಪಕಸುಬಾಗಿದೆ ಇದನ್ನು ಉದ್ಯಮವಾಗಿ ಪರಿಗಣಿಸಿ ಇದಕ್ಕೆ ವ್ಯಾಪಕವಾದ ಸೌಲಭ್ಯವನ್ನು ಕಲ್ಪಿಸಿ ಅವಶ್ಯವಿರುವ ಸಾಲ ಸೌಲಭ್ಯ, ಆಕಳು ಹಾಗೂ ಎಮ್ಮೆಗಳನ್ನ ನೀಡುವುದು ಮತ್ತು ಮೇವು, ಹಿಂಡಿಯನ್ನು ಸಬ್ಸಿಡಿ ದರದಲ್ಲಿ ನೀಡುವಂತಹ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವಾಗಲಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಶಶಿಧರ ಹೊನ್ನಣ್ಣವರ, ಮುಖಂಡರಾದ ಗದಿಗಯ್ಯ ಹಿರೇಮಠ, ಸಿದ್ದಲಿಂಗೇಶ ಕಲಿವಾಳ, ಸಿರಾಜಅಹ್ಮದ್ ಮುಲ್ಲಾ, ಮಲ್ಲೇಶ್ ಬೂದಿಹಾಳ, ಯಲ್ಲಪ್ಪಗೌಡ ಪಾಟೀಲ್, ಸುರೇಶ್ ಮುರಾರಿ, ರಮೇಶ್ ಹುಬ್ಬಳ್ಳಿ, ಬಾಪುಗೌಡ ಪಾಟೀಲ ಹಾಗೂ ಇನ್ನೂ ಅನೇಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 