ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ದಾಳಿ: ಮೂವರ ಬಂಧನ
Egg attack on BJP MLA Munirathna: Three arrested
ಬೆಂಗಳೂರು 25: ಬಿಜೆಪಿ ಶಾಸಕ ಮುನಿರತ್ನ ಅವರು ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ವೇಳೆ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ.
ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ ಸೇರಿದಂತೆ ಕೆಲವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 