ರಾಷ್ಟ್ರಪತಿ,ಉಪ ರಾಷ್ಟ್ರಪತಿ, ಪ್ರಧಾನಿಯಿಂದ ಈದ್ ಶುಭ ಹಾರೈಕೆ
ನವದೆಹಲಿ 12: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಈದ್ ಅಲ್-ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿ, ಮಾನವೀಯತೆ ಪ್ರೀತಿ, ಭ್ರಾತೃತ್ವ ಮತ್ತು ಸೇವೆಯನ್ನು ಈ ಹಬ್ಬ ಸಂಕೇತಿಸುತ್ತದೆ ಎಂದಿದ್ದಾರೆ.
ದೇಶದ ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತ ಮತ್ತು ವಿದೇಶದಲ್ಲಿರುವ ಮುಸ್ಲಿಂ ಸಹೋದರ ಸಹೋದರಿಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿರುವ ಕೋವಿಂದ್, ಈದ್ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಸಂಕೇತಿಸುತ್ತದೆ. ನಮ್ಮ ಸಂಯೋಜಿತ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ ಎಂದು ಕರೆ ನೀಡಿದ್ದಾರೆ. ಈದ್ ಅಧಾಕ್ಕೆ ಶುಭ ಕೋರಿ ಟ್ವೀಟ್ ಮಾಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಈದ್-ಉಲ್-ಅಧಾನ ಉದಾತ್ತ ಆದರ್ಶಗಳು ನಮ್ಮ ಜೀವನವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಸಮೃದ್ಧಗೊಳಿಸಲಿ ಮತ್ತು ದೇಶಕ್ಕೆ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ. ಈ ಹಬ್ಬವು ಭಕ್ತಿ, ನಂಬಿಕೆ ಮತ್ತು ತ್ಯಾಗದ ಸದ್ಗುಣಗಳಿಗೆ ಒಂದು ಸಂಕೇತವಾಗಿದೆ ಮತ್ತು ಸಹೋದರತ್ವ, ಸಹಾನುಭೂತಿ ಮತ್ತು ಐಕ್ಯತೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ, ಈದ್ ಉಲ್-ಅಧಾ ಸಂದರ್ಭದಲ್ಲಿ ದೇಶಕ್ಕೆ ನನ್ನ ಶುಭಾಶಯಗಳು. ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 