ವಿದ್ಯುತ್ ಆಘಾತ ರೈತ ಸಾವು
ನಾಸಿಕ್, ಮೇ ೨೬, ತನ್ನ ಹೊಲಗಳಿಗೆ ನೀರು ಹರಿಸಲು ವಿದ್ಯುತ್ ಪಂಪ್ ಗೆ ಚಾಲನೆ ನೀಡುತ್ತಿದ್ದಾಗ ೩೨ ವರ್ಷದ ರೈತನೊಬ್ಬ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತ ಪಟ್ಟಿರುವ ದುರ್ಘಟನೆ ದೇವಲಾ ತಾಲೊಕಿನ ವಸೊಲಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆಮೃತ ರೈತನನ್ನು ದೇವಲಾ ತಾಲೊಕಿನ ವಸೊಲಾ ಗ್ರಾಮದ ವಾಸಿ ಮಹೇಂದ್ರ ಅಲಿಯಾಸ್ ಬಾರ್ಕು ಶಂಕರ್ ವಾಘಾ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ ರೈತ ಮಹೇಂದ್ರ ಎಂದಿನಂತೆ ತನ್ನ ಕೃಷಿ ಬೆಳೆಗಳಿಗೆ ವಿದ್ಯುತ್ ಪಂಪ್ ನಿಂದ ನೀರು ಹರಿಸಲು ಜಮೀನಿಗೆ ತೆರಳಿದ್ದ, ವಿದ್ಯುತ್ ಪಂಪ್ ನ ಗುಂಡಿಯನ್ನು ಒತ್ತುತ್ತಿದ್ದಂತೆಯೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಸ್ಥಳದಲ್ಲೇ ಕುಸಿದುಬಿದ್ದು ತೀವ್ರ ಅಸ್ವಸ್ಥಗೊಂಡಿದ್ದು, ಈ ಘಟನೆಯನ್ನು ಗಮನಿಸಿದ ಸಮೀಪದಲ್ಲಿಯೇ ಇದ್ದ ರೈತರೊಬ್ಬರು ತಕ್ಷಣವೇ ದೇವಲಾ ಗ್ರಾಮೀಣ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಸ್ಪತ್ರೆಗೆ ತರುವ ಮುನ್ನವೇ ರೈತ ಮೃತಪಟ್ಟಿದ್ದಾನೆ ಎಂದು ವೈದ್ಯಾಧಿಕಾರಿ ಘೋಷಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಮೃತ ರೈತನ ದೇಹವನ್ನು ಆತನ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ ಈನಡುವೆ ದೇವಲಾ ಪೊಲೀಸರು ಅಪಘಾತದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 