ಬಿರುಗಾಳಿ ಮಳೆಗೆ ಶಾಲೆಯ ಮೇಲಚ್ವಾವಣಿ ವಿದ್ಯುತ್ ಕಂಬ ಧರಾಶಾಹಿ..!
Electricity pole collapses due to heavy rain..!
ಕಾಗವಾಡ 24: ತಾಲೂಕಿನಲ್ಲಿ ಮಂಗಳವಾರ ಹಾಗೂ ಬುಧವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಪಟ್ಟಣದ ಅಥಣಿ ರಸ್ತೆಗೆ ಹಾಗೂ ಸುತ್ತಮುತ್ತಲಿನ ಸುಮಾರು 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿ, ತಂತಿಗಳು ತುಂಡಾಗಿವೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಪಾರ ಹಾನಿ ಸಂಭವಿದೆ.
ಮಂಗಳವಾರ ರಾತ್ರಿ ಸುರಿದ ಮಳೆ ಬಿರುಗಾಳಿಗೆ ಪಟ್ಟಣದ ಬೆಳಗಾವಿ ರಸ್ತೆಗೆ ಹೊಂದಿಕೊಂಡಿರು ಬಾಬನಗೌಡ ಪಾಟೀಲ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ಕೊಣೆಗಳ ಹಾಗೂ ಸಭಾಂಗಣದ ಮೇಲ್ಚಾವಣಿ ಹಾರಿ ಹೋಗಿದ್ದು, ಶಾಲೆಗಳು ರಜೆ ಇರುವು ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲಾ.
ಬುಧವಾರವು ಕೂಡ ರಭಸವಾದ ಗಾಳಿ ಮಳೆ ಬಿದ್ದಿರುವ ಪರಿಣಾಮ ಗಿಡಗಳು ರಸ್ತೆಯ ಮೇಲೆ ಹೊರಳಿದ್ದು, ಅಧಿಕಾರಿಗಳು ಕೂಡಲೇ ಮರಗಳನ್ನು ತೆರವು ಗೋಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಂದು ಕಡೆ ಬಿಸಿಲಿನ ಜಳಕ್ಕೆ ಬೇಸತ್ತಿದ್ದ ಜನಕ್ಕೆ ಮಳೆರಾಯ ತಂಪೆಯೆರೆದರೇ ಇನ್ನೊಂದು ಕಡೆ ಬಿರುಗಾಳಿಗೆ ವಿದ್ಯುತ್ ಕಂಬಗಳು ಹಾಗೂ ಮೇಲ್ಚಾವಣಿಗಳು ಹಾರಿಹೋಗಿ ಬಹಳಷ್ಟು ಹಾನಿಯಾಗಿದೆ. ಶಾಸಕ ರಾಜು ಕಾಗೆ ಶಾಲೆಗೆ ಭೇಟಿ ನೀಡಿ, ಸರ್ಕಾರದಿಂದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 