ಬಿರುಗಾಳಿ ಮಳೆಗೆ ಶಾಲೆಯ ಮೇಲಚ್ವಾವಣಿ ವಿದ್ಯುತ್ ಕಂಬ ಧರಾಶಾಹಿ..!
Electricity pole collapses due to heavy rain..!
ಕಾಗವಾಡ 24: ತಾಲೂಕಿನಲ್ಲಿ ಮಂಗಳವಾರ ಹಾಗೂ ಬುಧವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಪಟ್ಟಣದ ಅಥಣಿ ರಸ್ತೆಗೆ ಹಾಗೂ ಸುತ್ತಮುತ್ತಲಿನ ಸುಮಾರು 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿ, ತಂತಿಗಳು ತುಂಡಾಗಿವೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಪಾರ ಹಾನಿ ಸಂಭವಿದೆ.
ಮಂಗಳವಾರ ರಾತ್ರಿ ಸುರಿದ ಮಳೆ ಬಿರುಗಾಳಿಗೆ ಪಟ್ಟಣದ ಬೆಳಗಾವಿ ರಸ್ತೆಗೆ ಹೊಂದಿಕೊಂಡಿರು ಬಾಬನಗೌಡ ಪಾಟೀಲ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ಕೊಣೆಗಳ ಹಾಗೂ ಸಭಾಂಗಣದ ಮೇಲ್ಚಾವಣಿ ಹಾರಿ ಹೋಗಿದ್ದು, ಶಾಲೆಗಳು ರಜೆ ಇರುವು ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲಾ.
ಬುಧವಾರವು ಕೂಡ ರಭಸವಾದ ಗಾಳಿ ಮಳೆ ಬಿದ್ದಿರುವ ಪರಿಣಾಮ ಗಿಡಗಳು ರಸ್ತೆಯ ಮೇಲೆ ಹೊರಳಿದ್ದು, ಅಧಿಕಾರಿಗಳು ಕೂಡಲೇ ಮರಗಳನ್ನು ತೆರವು ಗೋಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಂದು ಕಡೆ ಬಿಸಿಲಿನ ಜಳಕ್ಕೆ ಬೇಸತ್ತಿದ್ದ ಜನಕ್ಕೆ ಮಳೆರಾಯ ತಂಪೆಯೆರೆದರೇ ಇನ್ನೊಂದು ಕಡೆ ಬಿರುಗಾಳಿಗೆ ವಿದ್ಯುತ್ ಕಂಬಗಳು ಹಾಗೂ ಮೇಲ್ಚಾವಣಿಗಳು ಹಾರಿಹೋಗಿ ಬಹಳಷ್ಟು ಹಾನಿಯಾಗಿದೆ. ಶಾಸಕ ರಾಜು ಕಾಗೆ ಶಾಲೆಗೆ ಭೇಟಿ ನೀಡಿ, ಸರ್ಕಾರದಿಂದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 