ಬಿರುಗಾಳಿ ಮಳೆಗೆ ಶಾಲೆಯ ಮೇಲಚ್ವಾವಣಿ ವಿದ್ಯುತ್ ಕಂಬ ಧರಾಶಾಹಿ..!
Electricity pole collapses due to heavy rain..!
ಕಾಗವಾಡ 24: ತಾಲೂಕಿನಲ್ಲಿ ಮಂಗಳವಾರ ಹಾಗೂ ಬುಧವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಪಟ್ಟಣದ ಅಥಣಿ ರಸ್ತೆಗೆ ಹಾಗೂ ಸುತ್ತಮುತ್ತಲಿನ ಸುಮಾರು 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿ, ತಂತಿಗಳು ತುಂಡಾಗಿವೆ. ಇದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಪಾರ ಹಾನಿ ಸಂಭವಿದೆ.
ಮಂಗಳವಾರ ರಾತ್ರಿ ಸುರಿದ ಮಳೆ ಬಿರುಗಾಳಿಗೆ ಪಟ್ಟಣದ ಬೆಳಗಾವಿ ರಸ್ತೆಗೆ ಹೊಂದಿಕೊಂಡಿರು ಬಾಬನಗೌಡ ಪಾಟೀಲ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ಕೊಣೆಗಳ ಹಾಗೂ ಸಭಾಂಗಣದ ಮೇಲ್ಚಾವಣಿ ಹಾರಿ ಹೋಗಿದ್ದು, ಶಾಲೆಗಳು ರಜೆ ಇರುವು ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲಾ.
ಬುಧವಾರವು ಕೂಡ ರಭಸವಾದ ಗಾಳಿ ಮಳೆ ಬಿದ್ದಿರುವ ಪರಿಣಾಮ ಗಿಡಗಳು ರಸ್ತೆಯ ಮೇಲೆ ಹೊರಳಿದ್ದು, ಅಧಿಕಾರಿಗಳು ಕೂಡಲೇ ಮರಗಳನ್ನು ತೆರವು ಗೋಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಒಂದು ಕಡೆ ಬಿಸಿಲಿನ ಜಳಕ್ಕೆ ಬೇಸತ್ತಿದ್ದ ಜನಕ್ಕೆ ಮಳೆರಾಯ ತಂಪೆಯೆರೆದರೇ ಇನ್ನೊಂದು ಕಡೆ ಬಿರುಗಾಳಿಗೆ ವಿದ್ಯುತ್ ಕಂಬಗಳು ಹಾಗೂ ಮೇಲ್ಚಾವಣಿಗಳು ಹಾರಿಹೋಗಿ ಬಹಳಷ್ಟು ಹಾನಿಯಾಗಿದೆ. ಶಾಸಕ ರಾಜು ಕಾಗೆ ಶಾಲೆಗೆ ಭೇಟಿ ನೀಡಿ, ಸರ್ಕಾರದಿಂದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 