ಅವುರ್ಲಿಯ ತೋಟಗಳಲ್ಲಿ ಬಾಳೆ ಗೊನೆ ಹುಡುಕಾಟದಲ್ಲಿ ಆನೆ
Elephant spotted in avruli village
ಕಾರವಾರ 16: ಜೋಯಿಡಾ ತಾಲ್ಲೂಕಿನ ಅವುರ್ಲಿ ಗ್ರಾಮ ಹಾಗೂ ಗಣೇಶ ಗುಡಿ ಭಾಗದಲ್ಲಿ ಹೆಣ್ಣಾನೆಯೊಂದು ತೋಟಗಳಿಗೆ ಲಗ್ಗೆ ಇಟ್ಟಿದೆ. ಬಾಳೆ ಗೊನೆ ಆಹಾರ ಅರಸಿ ಬಂದ ಆನೆ ತೋಟ ನುಗ್ಗಿದ ಪರಿಣಾಮ ಅಡಿಕೆ ತೋಟ, ಭತ್ತದ ಗದ್ದೆಗಳು ನಷ್ಟಕ್ಕೆ ತುತ್ತಾಗಿವೆ. ಆನೆ ತೋಟಗಳಿಗೆ ನುಗ್ಗಿದ ವಿಷಯವನ್ನು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು.
ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪರೀಶೀಲನೆ ಮಾಡಿದರು. ದಾಂಡೇಲಿ, ಪಣಸೊಲಿ ಭಾಗದ ಆನೆ ಓಡಿಸುವ ಕಾರ್ಯ ನಡೆಯುತ್ತಿದೆ.
ಜೋಯಿಡಾ ಅರಣ್ಯಕ್ಕೆ ಹೊಂದಿಕೊಂಡ ಗ್ರಾಮದಲ್ಲಿ ಆನೆ ಭತ್ತದ ಗದ್ದೆ ಹಾಗೂ ಬಾಳೆ ತೋಟಗಳನ್ನು ಹುಡುಕಿ ಬರುವುದು ಸಾಮಾನ್ಯ. ರೈತರು ನಷ್ಟ ಭರಿಸಿಕೊಡುವಂತೆ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 