ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್ಜೆಟ್ ವಿಮಾನ
ಕೋಲ್ಕತ್ತಾ, ಫೆ.26, ವಿಮಾನದ ತೈಲ ಟ್ಯಾಂಕರ್ನಲ್ಲಿ ಸೋರಿಕೆಯಾಗುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಮುಂಬೈಯಿಂದ 183 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಗುವಾಹಟಿ ಮೂಲಕ ಸ್ಪೈಸ್ಜೆಟ್ ವಿಮಾನ (6480)ವನ್ನು ಅದರ ಪೈಲಟ್ ಇಲ್ಲಿನ ಡಮ್ ಡಮ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಸುರಕ್ಷಿತವಾಗಿ ಇಳಿಸಿದ್ದಾರೆ. ತೈಲ ಟ್ಯಾಂಕರ್ ಸೋರಿಕೆಯಾಗುತ್ತಿದೆ ಎಂಬುದು ಅರಿವಿಗೆ ಬಂದ ಬಳಿಕ ವಿಮಾನ ನಿಲ್ದಾಣದ ಸಂಚಾರ ನಿಯಂತ್ರಕರೊಂದಿಗೆ ಸಂವಹನ ನಡೆಸಲಾಯಿತು. ಅಲ್ಲಿಂದ ಹಸಿರು ನಿಶಾನೆ ಸಿಕ್ಕಿದ ಹತ್ತು ನಿಮಿಷಗಳ ನಂತರ ಬಳಿಕ ಪೈಲಟ್ಗಳು ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದರು.ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತ ಮತ್ತು ಆರೋಗ್ಯವಾಗಿದ್ದಾರೆ ಎಂದು ಇಲ್ಲಿನ ವಿಮಾನಯಾನ ಮೂಲಗಳು ತಿಳಿಸಿವೆ. ವಿಮಾನದ ವಾಟರ್ ಟ್ಯಾಂಕ್ ಸೋರಿಕೆಯಾಗುತ್ತಿರಬಹುದು. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 