ವೈಜ್ಞಾನಿಕೋದ್ಯಮದ ಗುಣಮಟ್ಟ, ಪ್ರಸ್ತುತತೆಗೆ ಒತ್ತು ಅಗತ್ಯ: ರಾಷ್ಟ್ರಪತಿ
ನವದಹಲಿ, ಫೆ 28 : ಶುಕ್ರವಾರ ದೇಶದ ವೈಜ್ಞಾನಿಕೋದ್ಯಮದ ಗುಣಮಟ್ಟ ಹಾಗೂ ಪ್ರಸ್ತುತತೆ ಹೆಚ್ಚಿಸುವ ಮೂಲಕ ಜನತೆಯ ಅಭಿವೃದ್ಧಿ ಹಾಗೂ ಏಳಿಗೆಗೆ ಕೊಡುಗೆ ನೀಡುವ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೋವಿಂದ್, “ನಾವು ಎಲ್ಲ ಬಗೆಯ ಜ್ಞಾನ ಮತ್ತು ಉಪಕರಣಗಳು, ಮಾನವಶಕ್ತಿ, ವಿಶ್ವವಿದ್ಯಾಲಯಗಳು ಮತ್ತು ಪ್ರಯೋಗಾಲಯಗಳೊಂದಿಗೆ ವಿಜ್ಞಾನ ಹಾಗೂ ವಿಶಾಲ ಸಮಾಜದ ಎಲ್ಲ ಮಧ್ಯಸ್ಥದಾರರನ್ನೂ ತಲುಪುವ ಗುರಿ ಹೊಂದಬೇಕು” ಎಂದು ಸಲಹೆ ನೀಡಿದರು.
“ವಿಜ್ಞಾನ ಮತ್ತು ತಂತ್ರಜ್ಞಾನದ ಮುಖೇನ ಪರಿಸರ, ಆರೋಗ್ಯ, ಆಹಾರ ಮತ್ತು ನೀರಿನ ಭದ್ರತೆ, ಸಂಪರ್ಕ ಸೇರಿದಂತೆ ಪ್ರಸ್ತುತ ನಮ್ಮೆದುರು ಇರುವ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ” ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವು ‘ವೈಜ್ಞಾನಿಕ ಸಾಮಾಜಿಕ ಜವಾಬ್ದಾರಿ’ ಎಂಬ ಪರಿಕಲ್ಪನೆಯೊಂದಿಗೆ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರತಿಪಾದಿಸುತ್ತಿರುವುದು ಸಂತಸ ತಂದಿದೆ. ಇದರಿಂದ ವೈಜ್ಞಾನಿಕ ಮೂಲಸೌಕರ್ಯ, ಕಾಲೇಜು ಸಿಬ್ಬಂದಿಯ ಮಾರ್ಗದರ್ಶನ, ಸಂಶೋಧನೆಯ ಸಂಸ್ಕೃತಿಯ ಸೃಷ್ಟಿಗೆ ಅನುವಾಗುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಪ್ರಾಯಪಟ್ಟರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 