ಸರ್ಕಾರಿ ನೌಕರರ ಮೇಲೆ ದೌರ್ಜನ್ಯ ಖಂಡಿಸಿ ನೌಕರರ ಸಂಘದಿಂದ ಪ್ರತಿಭಟನೆ
Employees' union protests against atrocities on government employees
ಹೂವಿನಹಡಗಲಿ 18: ಈಚೆಗೆ ಸರಕಾರಿ ನೌಕರರ ಮೇಲೆ ನಿಂದನೆ. ದೌರ್ಜನ್ಯ .ಕರ್ತವ್ಯ ಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕ್ರಮ ಕೈಗೊಂಡು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಗುರುವಾರ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸ್ತ್ರೀಯ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎ.ಕೊಟ್ರಗೌಡ ಮಾತನಾಡಿ ಪಾರದರ್ಶಕ ಆಡಳಿತದ ದೃಷ್ಟಿಯಿಂದ ಜಾರಿಯಾದ ಮಾಹಿತಿ ಹಕ್ಕು ಕಾಯ್ದೆಯನ್ನು ಕೆಲ ಸಂಘಟನೆಗಳ .ಪಕ್ಷದವರು ದುರ್ಬಳಕೆ ಮಾಡಿಕೊಂಡು ನೌಕರರ ಮೇಲೆ ನೀಡುತ್ತಿರುವ ದೌರ್ಜನ್ಯ .ಶೋಷಣೆ ತಪ್ಪಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಜತೆಗೆ ಸರ್ಕಾರಿ ನೌಕರರು ನಿರ್ಭಯದಿಂದ ಕೆಲಸ ಮಾಡಿ ಕೊಡಲು ಅನುವ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತಾ.ಪಂ.ಇಒ ಪರಮೇಶಪ್ಪ .ಸಿಡಿಪಿಒ ರಮನಗೌಡ ಮಾತನಾಡಿ ನೌಕರರ ಮೇಲೆ ಮೇಲೆ ನಿರಂತರವಾಗಿ ದೌರ್ಜನ್ಯ ಗಳ ತಡೆಯಬೇಕೆಂದು ಆಗ್ರಹಿಸಿದರು. ಬಿಇಒ ಮಹೇಶ್ ಪೂಜಾರ. ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಅಧಿಕಾರಿ. ಅಂಬೇಡ್ಕರ್. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ್.ಉತ್ತಂಗಿ ಆನಂದ . ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು . ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ನಾನಾ ಇಲಖೆ ಅಧಿಕಾರಿಗಳು ಭಾಗವಹಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 