ಮೊಂಬತ್ತಿ ಬೆಳಗಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ ಮೇ.17: ಇಲ್ಲಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು.
ಸವಲಭ್ಯಗಳ ಕೊರತೆಯ ನಡುವೆಯೂ ರೋಗಿಗಳ ಸೇವೆ ಮಾಡುತ್ತಿದ್ದೇವೆ,ನಮಗೂ ಬೆಳಕು ಬೇಕು ಎಂಬ ಸಂದೇಶವನ್ನು ಮೊಂಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಿದರು. ಕೊರೊನಾ ಭೀತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಗುತ್ತಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಸಕರ್ಾರ ಕೂಡಲೇ ಈಡೇರಿಸಬೇಕೆಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಕಾರ್ಯದಶರ್ಿ ಬಿ.ಈ.ಮಹೇಶ ಕುಮಾರ ಆಗ್ರಹಿಸಿದರು.
ಸಂಗದ ಪದಾಧಿಕಾರಿಗಳಾದ ಡಾ.ಅನಿತಾ, ಡಾ.ರಮ್ಯ,ಡಾ.ಗೀತಾ, ಡಾ.ಕವಿತಾ, ಕೆ.ಪಿ.ರವಿರಾಜ, ವಿಶ್ವನಾಥ, ಕೆ.ಎ.ನಾಗರಾಜ, ಕರಿಬಸಪ್ಪ, ರವಿರಾಜ, ಮೇಘರಾಜ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 