ಕಾರ್ಮಿಕರಿಗೆ ಸಕಲ ಸೌಕರ್ಯ ಕಲ್ಪಿಸಿ ಕೊಡಿ: ನ್ಯಾ.ಕೃಷ್ಣ ಅಸೋಡೆ
ಬಳ್ಳಾರಿ, ಏ.15: ಮುಂಡರಗಿ ಬಳಿ ನಿಮರ್ಿಸಲಾಗುತ್ತಿರುವ ಮಹಾತ್ಮಾಗಾಂಧಿ ಟೌನ್ಶಿಪ್ ಆಶ್ರಯ ಬಡಾವಣೆಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಬುಧವಾರ ಭೇಟಿ ನೀಡಿ ಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಕಾಮರ್ಿಕರು ತಂಗಿರುವ ವಸತಿ, ಶೌಚಾಲಯ, ನೀರಿನ ವ್ಯವಸ್ಥೆ ಸೇರಿದಂತೆ ಇನ್ನೀತರ ಸೌಕರ್ಯಗಳನ್ನು ಪರಿಶೀಲಿಸಿದರು. ಕಾಮರ್ಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿಮರ್ಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರಿಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಸೂಚನೆ ನೀಡಿದರು.
ಈ ಲಾಕ್ ಡೌನ್ ಸಂದರ್ಭದಲ್ಲಿ ಕಾಮರ್ಿಕರಿಗೆ ಸಕಲ ಸೌಕರ್ಯಗಳನ್ನು ಕಲ್ಪಿಸಿಕೊಡಿ; ತೊಂದರೆಗೆ ಸಿಲುಕಿಸಬೇಡಿ ಎಂದು ಹೇಳಿದ ನ್ಯಾ.ಕೃಷ್ಣ ಅಸೋಡೆ ಅವರು ಕಾಮರ್ಿಕರು ಏನಾದರೂ ಸಮಸ್ಯೆಗಳಾದಲ್ಲಿ ತಮ್ಮ ಗಮನಕ್ಕೆ ತರುವಂತೆ ಕೋರಿದರು.
ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ದೊರಕುವ ಸೌಲಭ್ಯಗಳನ್ನು ಸಹ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿ ಎನ್ಸಿಸಿ ಮೈದಾನದಲ್ಲಿ ಸ್ಥಾಪಿಸಲಾಗಿರುವ ತಾತ್ಕಾಲಿಕ ಮಾರುಕಟ್ಟೆಗೂ ಭೇಟಿ ನೀಡಿ ಪರಿಶೀಲಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತದೆಯೇ ಹಾಗೂ ಏನಾದರೂ ಸಮಸ್ಯೆಗಳಿವೆಯೇ ಎಂಬುದನ್ನು ವ್ಯಾಪಾರಿಗಳಿಂದ ಹಾಗೂ ಸ್ವಯಂಸೇವಕರಿಂದ ತಿಳಿದುಕೊಂಡರು.
ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳಾದ ಅಜರ್ುನ್ ಎಸ್.ಮಲ್ಲೂರು, ಕಾಸೀಂ ಚೂರಿಖಾನ್, ಕಾಮರ್ಿಕ ಇಲಾಖೆ ಅಧಿಕಾರಿಗಳಾದ ಕಮಲ್ ಶಾ ಅಲ್ತಾಫ್ ಅಹ್ಮದ್, ಚಂದ್ರಶೇಖರ ಐಲಿ, ಕಾಮರ್ಿಕ ನಿರೀಕ್ಷಕರಾದ ಎಂ.ರವಿದಾಸ್, ಸಿ.ಎನ್.ರಾಜೇಶ್ ಸೇರಿದಂತೆ ಇತರರು ಇದ್ದರು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 