ಮಸೀದಿ ಬಳಿ ಅತಿಕ್ರಮಣ ತೆರವು-ಕಲ್ಲುತೂರಾಟ
Encroachment clearance near mosque-stone pelting
ನವದೆಹಲಿ: ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ (MCD) ಬುಧವಾರ ಮುಂಜಾನೆ ಫೈಜ್ ಇ ಇಲಾಹಿ ಮಸೀದಿ ಸಮೀಪದ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಲ್ಲುತೂರಾಟ, ಘರ್ಷಣೆ ನಡೆದ ಘಟನೆ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮಸೀದಿ ಸಮೀಪದಲ್ಲಿನ ಅತಿಕ್ರಮಣ ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದಾಗ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವುದಾಗಿ ವರದಿ ವಿವರಿಸಿದೆ. ಬುಧವಾರ ನಸುಕಿನ 1ಗಂಟೆಗೆ ಫೈಝ್ ಇ ಇಲಾಹಿ ಮಸೀದಿಯ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿರುವ ಸುಮಾರು 100 ವರ್ಷಗಳಷ್ಟು ಹಳೆಯ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಎಂಸಿಡಿ ಅಧಿಕಾರಿಗಳು ತಿಳಿಸಿದ್ದಾರೆ.
ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ಸುಮಾರು 25 ಬುಲ್ಡೋಜರ್ ಗಳನ್ನು ಬಳಸಲಾಗಿದೆ. ಅಲ್ಲದೇ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದವರನ್ನು ಸಿಸಿಟಿವಿ ಆಧಾರದ ಮೇಲೆ ಗುರುತು ಪತ್ತೆ ಹಚ್ಚಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025ರ
ನವೆಂಬರ್ ನಲ್ಲಿ ದೆಹಲಿ ಹೈಕೋರ್ಟ್, ರಾಮಲೀಲಾ ಮೈದಾನ ಸಮೀಪದ ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ 38,940 ಚದರ ಅಡಿ ಅತಿಕ್ರಮಣ ಕಟ್ಟಡವನ್ನು ಮೂರು ತಿಂಗಳೊಳಗೆ ತೆರವುಗೊಳಿಸುವಂತೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಮತ್ತು ಲೋಕೋಪಯೋಗಿ ಇಲಾಖೆಗೆ ಆದೇಶ ನೀಡಿತ್ತು.
ತುರ್ಕ್ ಮನ್ ಗೇಟ್ ಪ್ರದೇಶದಲ್ಲಿನ ಕಟ್ಟಡದ ಮಾಲೀಕತ್ವದ ಬಗ್ಗೆ ಮಸೀದಿಯ ಆಡಳಿತ ಮಂಡಳಿಯಾಗಲಿ ಅಥವಾ ದೆಹಲಿ ವಕ್ಫ್ ಮಂಡಳಿಯಾಗಲಿ ಸೂಕ್ತ ಪುರಾವೆಗಳನ್ನು ನೀಡದ ಹಿನ್ನೆಲೆಯಲ್ಲಿ 0.195 ಎಕರೆ ಪ್ರದೇಶದಲ್ಲಿನ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಎಂಸಿಡಿ ಡಿಸೆಂಬರ್ ನಲ್ಲಿ ತಿಳಿಸಿತ್ತು.
ಅತಿಕ್ರಮಣ ಪ್ರದೇಶದಲ್ಲಿ ರಸ್ತೆಯ ಒಂದು ಭಾಗ, ಪಾದಚಾರಿ ಮಾರ್ಗ, ಬರಾತ್ ಘರ್, ಪಾರ್ಕಿಂಗ್ ಹಾಗೂ ಖಾಸಗಿ ಕ್ಲಿನಿಕ್ ಗಳು ಸೇರಿರುವುದಾಗಿ ವರದಿ ತಿಳಿಸಿದೆ. ಅತಿಕ್ರಮಣ ಪ್ರದೇಶ ತೆರವುಗೊಳಿಸುವ ಕಾರ್ಯಾಚರಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಂಗಳವಾರ (ಜ.06) ನಗರಾಭಿವೃದ್ಧಿ ಸಚಿವಾಲಯ, ಎಂಸಿಡಿ ಹಾಗೂ ದೆಹಲಿ ವಕ್ಫ್ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 