ಮೂರು ರಾಷ್ಟ್ರಗಳ ಪ್ರವಾಸ ಅಂತ್ಯ: ತವರಿಗೆ ಮರಳಿದ ಮೋದಿ
ನವದೆಹಲಿ, ಆ 27 ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್, ಬಹ್ರೇನ್ ಮತ್ತು ಯುಎಇ ಮೂರು ರಾಷ್ಟ್ರಗಳ ಪ್ರವಾಸ ಮುಗಿಸಿ ಮಂಗಳವಾರ ನವದೆಹಲಿಗೆ ಮರಳಿದ್ದಾರೆ. ಫ್ರಾನ್ಸ್ನ ಬಿಯರಿಟ್ಜ್ನಲ್ಲಿ ಇತ್ತೀಚೆಗೆ ನಡೆದ ಜಿ 7 ಶೃಂಗಸಭೆಯಲ್ಲಿ ಅವರು ಡಿಜಿಟಲ್ ರೂಪಾಂತರ ಮತ್ತು ಹವಾಮಾನ ಬದಲಾವಣೆ ಕುರಿತ ಸಮಾವೇಶದಲ್ಲಿ ಭಾಗವಹಿಸಿದ್ದರು. ಇದೇ 22 ರಂದು ಅವರು ಪ್ಯಾರಿಸ್ ತಲುಪಿ ಅಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಮಾತುಕತೆ ನಡೆಸಿ, ನಂತರ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದರು. ಇದರ ಬೆನ್ನಲ್ಲೇ, ಪ್ರಧಾನ ಮಂತ್ರಿ ಆ. 23 ರಂದು ಯುಎಇಗೆ ತೆರಳಿ ಅಬುಧಾಬಿಯ ರಾಜ ರಾಜಕುಮಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಂದ 'ಆರ್ಡರ್ ಆಫ್ ಜಾಯೆದ್' ಪ್ರಶಸ್ತಿ ಸ್ವೀಕರಿಸಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ನಂತರ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಬಹ್ರೇನ್ ತಲುಪಿದ ಅವರಿಗೆ 25 ರಂದು ಬಹ್ರೇನ್ ರಾಜಕುಮಾರ ಮೋದಿ ಅವರಿಗೆ 'ದಿ ಕಿಂಗ್ ಹಮದ್ ಆರ್ಡರ್ ಆಫ್ ದಿ ನವೋದಯ ಪ್ರಶಸ್ತಿ ನೀಡಿ ಗೌರವಿಸಿದ್ದರು. ಜಿ 7 ಶೃಂಗಸಭೆಯಲ್ಲಿ ಮೋದಿ ಮಾತನಾಡಿ, ಅಲ್ಲಿ ಜೀವವೈವಿಧ್ಯತೆ, ಹವಾಮಾನ ಬದಲಾವಣೆ, ಜಲ ಮಾಲಿನ್ಯ ನಿಯಂತ್ರಣಕ್ಕೆ ಭಾರತದ ಕೊಡುಗೆಯನ್ನು ಒತ್ತಿ ಹೇಳಿದ್ದರು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 