ಕಬ್ಬೂರ ಕುವೆಂಪು ಶತಮಾನೋತ್ಸವ ಶಾಲೆಯಲ್ಲಿ ಪರಿಸರ ದಿನ ಆಚರಣೆ
ಹಾವೇರಿ: ಜು.08: ಹಾವೇರಿ ತಾಲೂಕಿನ ಕಬ್ಬೂರ ಗ್ರಾಮದ ಕುವೆಂಪು ಶತಮಾನೋತ್ಸವ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ವಿವಿಧ ಬಗೆಯ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ ಅವರು ಮಾತನಾಡಿ, ಶಾಲೆಯ ಶಿಕ್ಷಕರು ಮಕ್ಕಳ ಬಗ್ಗೆ ಕಾಳಜಿ ಇಟ್ಟುಕೊಂಡು ಅಕ್ಷರ ದಾಸೋಹ ಯೋಜನೆಗೆ ಅನುಕೂಲವಾಗುವ ಬಗೆ ಬಗೆಯ ಸಸಿಗಳನ್ನು ಬೆಳೆಸಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಅಕ್ಷರದಾಸೋಹಕ್ಕೆ ಅನುಕೂಲವಾಗಲೆಂದು ಶಾಲೆಯ ಶಿಕ್ಷರು ಸೇರಿ ತಮ್ಮ ಸ್ವಂತ ಹಣದಿಂದಲೇ ಖರೀದಿಸಿದ ತೆಂಗು, ಕರಿಬೇವು, ಲಿಂಬೆ ನುಗ್ಗೆ ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.
ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ ಭಗವಂತಗೌಡರ, ತಾಲೂಕ ದೈಹಿಕ ಶಿಕ್ಷಣ ನಿದರ್ೆಶಕ ಎನ್.ಐ ಇಚ್ಚಂಗಿ, ಶಾಲೆಯ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಮತ್ತಿತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 