ಜ್ಞಾನ ಜ್ಯೋತಿ ಶಾಲೆಯಲ್ಲಿ ಪರಿಸರ ದಿನಾಚರಣೆ
Environment Day celebration at Gyan Jyoti School
ಹೂವಿನಹಡಗಲಿ 28: ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಜ್ಞಾನ ಜ್ಯೋತಿ ಶಾಲೆ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಅರಣ್ಯಾಧಿಕಾರಿ ಹಾಗೂ ಸ್ನೇಹ ಸಾಗರ ವಿದ್ಯಾ ಸಂಸ್ಥೆಯ ಅಧ್ಯಕ್ಷ ವೀರ್ಪ ಮುದೇಗೌಡ್ರು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಶಿಕ್ಷಣ ಅತಿ ಮುಖ್ಯವಾದದ್ದು ಜತೆಗೆ ಪರಿಸರ ಕಾಳಜಿ ಅತಿ ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಠ ದಡಾರ್ಪ, ನಿವೃತ್ತ ಶಿಕ್ಷಕ ಯು.ವೀರೇಶ್.ಹೆಚ್ ಎಂ ಮಲ್ಲಿಕಾರ್ಜುನಯ್ಯ, ಯೋಗ ಶಿಕ್ಷರಾದ ನವೀನ್ ಆಧ್ಯಾತ್ಮಿಕ ಬೋಧನೆ ಮಾಡಿದರು, ಶಾಲೆ ಮುಖ್ಯೋಪಾಧ್ಯಾಯರ ನಿಸಾರ್ ಅಹಮದ್, ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ವೇಳೆ ವಿದ್ಯಾರ್ಥಿಗಳಿಗೆ ಸೂಕ್ತ ಆಕರ್ಷಕ ಬಹುಮಾನ ನೀಡುವುದರ ಮೂಲಕ ಶಾಲೆಗೆ ಸ್ವಾಗತ ಮಾಡಿಕೊಂಡರು, ಎಲ್ಲಾ ತರಗತಿಯ ಮಕ್ಕಳಿಂದ ನೃತ್ಯ ಹಾಗೇನೇ ಭೋಜನ ವ್ಯವಸ್ಥೆಯನ್ನು ಏರಿ್ಡಸಲಾಗಿತ್ತು. ಈ ಕಾರ್ಯಕ್ರಮ ಸಂಘಟನೆಯನ್ನು ಡಾ. ನೆಪೊಲಿಯನ್ ಆಡಳಿತ ಅಧಿಕಾರಿಗಳು ನಿರ್ವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 