ಜ್ಞಾನ ಜ್ಯೋತಿ ಶಾಲೆಯಲ್ಲಿ ಪರಿಸರ ದಿನಾಚರಣೆ
Environment Day celebration at Gyan Jyoti School
ಹೂವಿನಹಡಗಲಿ 28: ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಜ್ಞಾನ ಜ್ಯೋತಿ ಶಾಲೆ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಅರಣ್ಯಾಧಿಕಾರಿ ಹಾಗೂ ಸ್ನೇಹ ಸಾಗರ ವಿದ್ಯಾ ಸಂಸ್ಥೆಯ ಅಧ್ಯಕ್ಷ ವೀರ್ಪ ಮುದೇಗೌಡ್ರು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಶಿಕ್ಷಣ ಅತಿ ಮುಖ್ಯವಾದದ್ದು ಜತೆಗೆ ಪರಿಸರ ಕಾಳಜಿ ಅತಿ ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಠ ದಡಾರ್ಪ, ನಿವೃತ್ತ ಶಿಕ್ಷಕ ಯು.ವೀರೇಶ್.ಹೆಚ್ ಎಂ ಮಲ್ಲಿಕಾರ್ಜುನಯ್ಯ, ಯೋಗ ಶಿಕ್ಷರಾದ ನವೀನ್ ಆಧ್ಯಾತ್ಮಿಕ ಬೋಧನೆ ಮಾಡಿದರು, ಶಾಲೆ ಮುಖ್ಯೋಪಾಧ್ಯಾಯರ ನಿಸಾರ್ ಅಹಮದ್, ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ವೇಳೆ ವಿದ್ಯಾರ್ಥಿಗಳಿಗೆ ಸೂಕ್ತ ಆಕರ್ಷಕ ಬಹುಮಾನ ನೀಡುವುದರ ಮೂಲಕ ಶಾಲೆಗೆ ಸ್ವಾಗತ ಮಾಡಿಕೊಂಡರು, ಎಲ್ಲಾ ತರಗತಿಯ ಮಕ್ಕಳಿಂದ ನೃತ್ಯ ಹಾಗೇನೇ ಭೋಜನ ವ್ಯವಸ್ಥೆಯನ್ನು ಏರಿ್ಡಸಲಾಗಿತ್ತು. ಈ ಕಾರ್ಯಕ್ರಮ ಸಂಘಟನೆಯನ್ನು ಡಾ. ನೆಪೊಲಿಯನ್ ಆಡಳಿತ ಅಧಿಕಾರಿಗಳು ನಿರ್ವಹಿಸಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 