ಪರಿಸರ ಮಾಲಿನ್ಯ ಉಪನ್ಯಾಸ
Environmental Pollution Lecture
ಪರಿಸರ ಮಾಲಿನ್ಯ ಉಪನ್ಯಾಸ
ಯಮಕನಮರಡಿ 30: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜು ಯಮಕನಮರಡಿಯ ಹಸಿರು ಪಡೆ (ಇಕೋ ಕ್ಲಬ್) ವತಿಯಿಂದ ವಿದ್ಯಾರ್ಥಿಗಳಿಗಾಗಿ ಪರಿಸರ ಮಾಲಿನ್ಯ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವಿಶೇಷ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಬಿ.ಬಿ. ಕೊಡ್ಲಿ ಸಮಾಜ ಶಾಸ್ತ್ರ ಉಪನ್ಯಾಸಕರು ಭಾಗವಹಿಸಿ ಪರಿಸರ ಮಾಲಿನ್ಯದ ಇತಿಹಾಸ ಪರಿಸರ ಮಾಲಿನ್ಯಕ್ಕೆ ಮುಂದುವರೆದ ದೇಶಗಳ ನಕಾರಾತ್ಮಕ ಕೊಡುಗೆಗಳು ಪರಿಸರ ಸಮ್ಮೇಳನಗಳು ಜೀವ ವೈವಿಧ್ಯತೆ ಕೈಗಾರೀಕರಣ ಹಾಗೂ ಪರಿಸರ ಸಂರಕ್ಷಣೆ ಹಾಗೂ ಜೀವ ಸಂಕುಲಗಳ ರಕ್ಷಣೆಯ ಜವಾಬ್ದಾರಿಯಲ್ಲಿ ವಿದ್ಯಾರ್ಥಿ ಹಾಗೂ ಸಮಾಜದ ಪಾತ್ರ ಕುರಿತು ಉಪನ್ಯಾಸ ನೀಡಿದರು.
ಎಸ್.ಆರ್ ತಬರಿ ಇವರು ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ಮಾಲಿನ್ಯ ಅದರ ಪ್ರಕಾರಗಳು ಪರಿಸರ ಮಾಲಿನ್ಯಕ್ಕೆ ಕಾರಣಗಳು ಕುರಿತು ತಿಳಿಸಿದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎ.ರಾಮನಕಟ್ಟಿ ವಹಿಸಿದ್ದರು. ರಸಾಯನಶಾಸ್ತ್ರ ಉಪನ್ಯಾಸಕ ಎ.ಎ.ಕಿವಂಡಾ ನಿರೂಪಿಸಿದರು. ಕಾಲೇಜಿನ ಬೋಧಕ ಸಿಬ್ಬಂದಿಗಳು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 