ಪರಿಸರ ಸಂರಕ್ಷಣೆ ಜಾಗೃತಿ ಅಗತ್ಯ: ಡಾ.ಟಿ.ಗಂಗಾಧರ ಗೌಡ
Environmental protection awareness is necessary: Dr. T. Gangadhara Gowda
ಬಳ್ಳಾರಿ 11: ಪ್ರಸ್ತುತದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಬದ್ಧ ಪ್ರಯತ್ನವಾಗಬೇಕಿದೆ ಎಂದು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಹೇಳಿದರು.
ಕೆಎಸ್ಸಿಎಎಸ್ಐ ಬಳ್ಳಾರಿ ಶಾಖೆ ವತಿಯಿಂದ ರಾಷ್ಟ್ರೀಯ ಶಸ್ತ್ರಚಿಕಿತ್ಸಕ ವಾರಾಚರಣೆ ಅಂಗವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ನೀರೂಣಿಸಿ ಬಳಿಕ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಸುತ್ತ-ಮುತ್ತಲಿನ ಪರಿಸರ ರಕ್ಷಣೆ ಮಾಡುವ ಕಾಳಜಿ ವಹಿಸುವ ಮೂಲಕ ಪರಿಸರ ಹಾನಿ ಮಾಡದಂತೆ ನೋಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ಅಧೀಕ್ಷಕರಾದ ಡಾ.ಇಂಧುಮತಿ, ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಕಾಸಾ ಸೋಮಶೇಖರ್, ಎಎಸ್ಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ದಿವಾಕರ ರೆಡ್ಡಿ, ಖಜಾಂಚಿ ಡಾ.ವೈ.ಗುರುಬಸವನ ಗೌಡ, ಶಾಖಾ ಅಧ್ಯಕ್ಷ ಡಾ.ಶೇಖಪ್ಪ ಮಾಳಗಿಮನಿ, ನಗರದ ಹಿರಿಯ ವೈದ್ಯರುಗಳಾದ ಡಾ.ಸೋಮೇಶ್ವರ ಗಡ್ಡಿ, ಡಾ.ಅರುಣ್ ಎಸ್.ಕೆ., ಡಾ.ಅರುಣಾ ಕಾಮಿನೇನಿ, ಡಾ.ಅರವಿಂದ್ ಪಾಟೀಲ್ ಸೇರಿದಂತೆ ಜಿಲ್ಲಾ ಶಾಖೆಯ ಸದಸ್ಯರು, ಕೇಂದ್ರದ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 