ಜೀವ ಸಂಕುಲದ ಉಳಿವಿಗಾಗಿ ಪರಿಸರ ರಕ್ಷಣೆ ಅಗತ್ಯ: ದೇಶಪಾಂಡೆ
ಮೂಡಲಗಿ 05: 'ಜೀವ ಸಂಕುಲದ ಉಳಿವಿಗಾಗಿ ಪರಿಸರವನ್ನು ಕಾಯುವುದು ಇಂದಿನ ಅಗತ್ಯವಾಗಿದೆ' ಎಂದು ಲಾಯನ್ಸ್ ಕ್ಲಬ್ ರೀಜಿನಲ್ ಪ್ರೆಸಿಡೆಂಟ್ ಅನಿಲ್ ದೇಶಪಾಂಡೆ ಹೇಳಿದರು.
ಇಲ್ಲಿಯ ಲಾಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಜರುಗಿದ ವಾಷರ್ಿಕ ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಆರೋಗ್ಯಪೂರ್ಣವಾದ ಸಮಾಜ ಮತ್ತು ಸಮರ್ಥ ಯುವಕರನ್ನು ಸಿದ್ಧಪಡಿಸುವುದು ಅವಶ್ಯವಿದೆ ಎಂದರು.
ಸಮಾಜ ಸೇವೆಯು ನಿಸ್ವಾರ್ಥವಾಗಿರಬೇಕು. ಪ್ರತಿ ಮನುಷ್ಯ ಒಂದಿಷ್ಟು ಸಮಾಜ ಸೇವೆಯಲ್ಲಿ ತೊಡಗುವುದರ ಮೂಲಕ ಬದುಕಿನ ಸಾರ್ಥಕತೆಯನ್ನು ಕಾಣಬೇಕು ಎಂದರು.
ಮೂಡಲಗಿಯ ಲಾಯನ್ಸ್ ಕ್ಲಬ್ದ ವೈವಿಧ್ಯಮಯವಾದ ಸಮಾಜ ಸೇವಾ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಪ್ರಶಂಸಿದರು.
ಮೂಡಲಗಿ ಪರಿವಾರ ಅಧ್ಯಕ್ಷ ಪ್ರಕಾಶ ಬಾಗೇವಾಡಿ, ಲಯನ್ಸ್ ಕ್ಲಬ್ ಜೋನಲ್ ಪ್ರೆಸಿಡೆಂಟ್ ವೆಂಕಟೇಶ ಸೋನವಾಲಕರ ಮಾತನಾಡಿದರು.
ಒಂದು ವರ್ಷದ ಕಾರ್ಯಚಟುವಟಿಕೆಗಳ ಕುರಿತು ಬಾಲಶೇಖರ ಬಂದಿ ವಿವರಿಸಿದರು.
ಲಯನ್ಸ್ ಕ್ಲಬ್ ಗೌರವ ಅಧ್ಯಕ್ಷ ಮಹಾಂತೇಶ ಹೊಸೂರ, ಕಾರ್ಯದಶರ್ಿ ಶ್ರೀಶೈಲ್ ಲೋಕನ್ನವರ, ಖಚಾಂಚಿ ಗಿರೀಶ ಆಸಂಗಿ ವೇದಿಕೆಯಲ್ಲಿದ್ದರು.
ಮಲ್ಲಿನಾಥ ಶೆಟ್ಟಿ ನಿರೂಪಿಸಿದರು, ಶಿವಾನಂದ ಕಿತ್ತೂರ ಪರಿಚಯಿಸಿದರು, ಮಹಾವೀರ ಸಲ್ಲಾಗೋಳ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 