ಜೀವ ಸಂಕುಲದ ಉಳಿವಿಗಾಗಿ ಪರಿಸರ ರಕ್ಷಣೆ ಅಗತ್ಯ: ದೇಶಪಾಂಡೆ
ಮೂಡಲಗಿ 05: 'ಜೀವ ಸಂಕುಲದ ಉಳಿವಿಗಾಗಿ ಪರಿಸರವನ್ನು ಕಾಯುವುದು ಇಂದಿನ ಅಗತ್ಯವಾಗಿದೆ' ಎಂದು ಲಾಯನ್ಸ್ ಕ್ಲಬ್ ರೀಜಿನಲ್ ಪ್ರೆಸಿಡೆಂಟ್ ಅನಿಲ್ ದೇಶಪಾಂಡೆ ಹೇಳಿದರು.
ಇಲ್ಲಿಯ ಲಾಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಜರುಗಿದ ವಾಷರ್ಿಕ ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಆರೋಗ್ಯಪೂರ್ಣವಾದ ಸಮಾಜ ಮತ್ತು ಸಮರ್ಥ ಯುವಕರನ್ನು ಸಿದ್ಧಪಡಿಸುವುದು ಅವಶ್ಯವಿದೆ ಎಂದರು.
ಸಮಾಜ ಸೇವೆಯು ನಿಸ್ವಾರ್ಥವಾಗಿರಬೇಕು. ಪ್ರತಿ ಮನುಷ್ಯ ಒಂದಿಷ್ಟು ಸಮಾಜ ಸೇವೆಯಲ್ಲಿ ತೊಡಗುವುದರ ಮೂಲಕ ಬದುಕಿನ ಸಾರ್ಥಕತೆಯನ್ನು ಕಾಣಬೇಕು ಎಂದರು.
ಮೂಡಲಗಿಯ ಲಾಯನ್ಸ್ ಕ್ಲಬ್ದ ವೈವಿಧ್ಯಮಯವಾದ ಸಮಾಜ ಸೇವಾ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಪ್ರಶಂಸಿದರು.
ಮೂಡಲಗಿ ಪರಿವಾರ ಅಧ್ಯಕ್ಷ ಪ್ರಕಾಶ ಬಾಗೇವಾಡಿ, ಲಯನ್ಸ್ ಕ್ಲಬ್ ಜೋನಲ್ ಪ್ರೆಸಿಡೆಂಟ್ ವೆಂಕಟೇಶ ಸೋನವಾಲಕರ ಮಾತನಾಡಿದರು.
ಒಂದು ವರ್ಷದ ಕಾರ್ಯಚಟುವಟಿಕೆಗಳ ಕುರಿತು ಬಾಲಶೇಖರ ಬಂದಿ ವಿವರಿಸಿದರು.
ಲಯನ್ಸ್ ಕ್ಲಬ್ ಗೌರವ ಅಧ್ಯಕ್ಷ ಮಹಾಂತೇಶ ಹೊಸೂರ, ಕಾರ್ಯದಶರ್ಿ ಶ್ರೀಶೈಲ್ ಲೋಕನ್ನವರ, ಖಚಾಂಚಿ ಗಿರೀಶ ಆಸಂಗಿ ವೇದಿಕೆಯಲ್ಲಿದ್ದರು.
ಮಲ್ಲಿನಾಥ ಶೆಟ್ಟಿ ನಿರೂಪಿಸಿದರು, ಶಿವಾನಂದ ಕಿತ್ತೂರ ಪರಿಚಯಿಸಿದರು, ಮಹಾವೀರ ಸಲ್ಲಾಗೋಳ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 