ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ
Environmental protection is the responsibility of all of us
ಹಾವೇರಿ 11: ಉತ್ತಮ ಆರೋಗ್ಯಯುತ ಬದುಕಿಗೆ ಸಮತೋಲನ ಪರಿಸರ ಅವಶ್ಯಕ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಛತ್ರಪತಿ ಶಿವಾಜಿ ಮಹಿಳಾ ಸ್ವ-ಸಹಾಯ ಸಂಘ(ರಿ)ದ ಅಧ್ಯಕ್ಷರಾದ ಶಶಿರೇಖಾ ರಮೇಶ ಮುಂಜೋಜಿ ಹೇಳಿದರು. ನಗರದಲ್ಲಿನ ಸಂಘದ ಸದಸ್ಯರಾದ ಸಂಜನಾ ಮೋರೆ ಅವರ ಗೃಹದಲ್ಲಿ ಛತ್ರಪತಿ ಶಿವಾಜಿ ಮಹಿಳಾ ಸ್ವಸಹಾಯ ಸಂಘ(ರಿ)ಹಾವೇರಿ ವತಿಯಿಂದ ಆಯೋಜಿಸಿದ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಮನುಷ್ಯನ ಬದುಕು ಒತ್ತಡದ ಸಾಗುತ್ತಿದೆ. ಭೂಮಿಯ ಮೇಲೆ ಪರಿಸರ ಸಮತೋಲನೆ ಕಾಪಾಡಲು ನಾವೆಲ್ಲರೂ ಬದ್ಧರಾಗಬೇಕಿದೆ. ನಮ್ಮ ಸಂಘದ ಪ್ರತಿಯೊಬ್ಬರು ಪರಿಸರ ಕಾಳಜಿಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮರ ಬೆಳೆಸುವ ಪ್ರಯತ್ನ ಮಾಡೋಣ.ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸೋಣ ಎಂದು ಪರಿಸರ ಮಹತ್ವದ ಕುರಿತು ಮಾತನಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 