ವಿಜಯಪುರ 17: ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣದ ಹೊಣೆ ನಮ್ಮೆಲ್ಲರದ್ದಾಗಿದ್ದು ಆರೋಗ್ಯಯುತ ಜೀವನಕ್ಕಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಅವರು ಹೇಳಿದರು.
ಮಂಗಳವಾರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ಘೋಷವಾಕ್ಯದಡಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ಪರಿಸರ ಕಾಪಾಡಿಕೊಳ್ಳುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆಯನ್ನು ನೀಡಬೇಕಾಗಿದೆ. ಪರಿಸರ ಸ್ನೇಹಿ ಅಭ್ಯಾಸ ರೂಢಿಗತಗೊಳಿಸಿಕೊಳ್ಳಿ, ಪರಿಸರ ಸಂರಕ್ಷಣೆ ಮೂಲಕ ಆರೋಗ್ಯಕರ ಹಾಗೂ ಸುಸ್ಥಿರ ಭವಿಷ್ಯವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಾತನಾಡಿ, ನಮ್ಮ ಪೂರ್ವಜರು ಆರೋಗ್ಯಯುತ ಜೀವನ ನಮಗೆ ಮಾದರಿಯಾಗಿದೆ. ಅಂದಿನ ಸ್ವಚ್ಚಂದ ಪರಿಸರ ಇಂದು ನಾವು ಕಾಣುತ್ತಿಲ್ಲ, ಪ್ಲಾಸ್ಟಿಕ್ ಅನ್ನುವುದು ಈಚೆಗೆ ಬಂದು ವಸ್ತು ಇದನ್ನು ಇಂದು ನಾವೆಲ್ಲರೂ ಹೇರಳವಾಗಿ ಬಳಸುತ್ತಿರುವುದರಿಂದ ಪರಿಸರದಲ್ಲಿ ಸಾಕಷ್ಟು ಹಾನಿಗಳಾಗುತ್ತಿವೆ. ಪ್ಲಾಸ್ಟಿಕ್ ಬಳಕೆ ಮಾಡದೇ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರ ಸ್ನೇಹಿ ವಸ್ತುಗಳ ಬಳಸಲು ಆದ್ಯತೆ ನೀಡೋಣ. ಐತಿಹಾಸಿಕ ನಗರದ ಸ್ವಚ್ಚತೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಮಾಡದೇ ಆರೋಗ್ಯಯತ ಜೀವನ ನಡೆಸಲು ಪರಿಸರ ಕಾಪಾಡಿಕೊಳ್ಳಲು ಸಹಕರಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಅನೇಕ ಕಾರ್ಯಚಟುವಟಿಕೆಗಳನ್ನು ಆಯೋಜಿಸಿ ಅವರಲ್ಲಿ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ತಮ್ಮ ನೆರಹೊರೆಯವರಿಗೆ ಈ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಜಲ ಬಿರಾದಾರಿ ಅಧ್ಯಕ್ಷ ಪೀಟರ್ ಅಲೇಕ್ಸಾಂಡರ್ ಅವರು ಪರಿಸರ ಮಹತ್ವದ ಕುರಿತಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೆ ಮುಂಚೆ ಮಹಾನಗರ ಪಾಲಿಕೆ ಆವರಣದಿಂದ ಗಾಂಧಿ ಭವನದವರೆಗೆ ಪರಿಸರ ಜಾಥಾ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಪರಿಸರದ ಮಹತ್ವ ಮತ್ತು ಸಂರಕ್ಷಣೆ ಕುರಿತು ಶಾಲಾ ಕಾಲೇಜಿನ ವಿದ್ಯಾಥಿಗಳಿಗೆ ಆಯೋಜಿಸಲಾದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಸಸಿ, ಬಟ್ಟೆ ಚೀಲಗಳ ವಿತರಣೆಯೊಂದಿಗೆ ಪ್ರಮಾಣ ಪತ್ರ ನೀಡಲಾಯಿತು.
ಹಿರಿಯ ಸಿವಿಲ್ ನ್ಯಾಯಾದೀಶರಾದ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಜಿಲ್ಲಾ ನ್ಯಾಯವಾದಿ ಸಂಘದ ಅಧ್ಯಕ್ಷ ಡಿ.ಜಿ ಬಿರಾದಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿವೇಕ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾವತಿ ಅಂಕಲಗಿ, ಪ್ರೇಮಾನಂದ ಬಿರಾದಾರ ಸೇರಿದಂಟ್ಸಾ-್ಶಲಾ ಕಾಲೇಜಿನ ವಿದಾರ್ಥಿಗಳು, ರ್ಸೌಜನಿಕರು ಉಪಸ್ಥಿತರಿದ್ದರು.