ಬಾಲ್ಯ ವಿವಾಹ ನಿಷೇಧ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
Essay Competition on Prohibition of Child Marriage: Prize Distribution to Winners
ಯಮಕನಮರಡಿ 18 : ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ, ಶಕ್ತಿ ಸದನ ಪುನರ್ವಸತಿ ಕೇಂದ್ರ, ಹಿಡಕಲ್ ಡ್ಯಾಂ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ, ಯರಗಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಸ್ನೇಹಾ ಗಾಣಗಿ ಪ್ರಥಮ, ಕುಮಾರಿ ಕೃಷಿ ಒಡೆಯರ್ ದ್ವಿತೀಯ ಹಾಗೂ ಕುಮಾರಿ ಸ್ನೇಹಲ ಧಗಾಟಿ ತೃತೀಯ ಸ್ಥಾನ ಪಡೆದರು. ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಕಿರಣ್ ಚೌಗಲಾ ಮಾತನಾಡಿ, ಬಾಲ್ಯ ವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ವಿದ್ಯಾರ್ಥಿಗಳು ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಕುರಿತು ತಿಳಿದುಕೊಂಡು ಕುಟುಂಬ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಉಪ ಪ್ರಾಂಶುಪಾಲೆ ಎ.ಆರ್. ಮಠಪತಿ ಅವರು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಸಮುದಾಯದ ಪಾತ್ರದ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಪ್ರಭಾ ಘಸ್ತಿ, ಗೀತಾ, ಆರ್.ಆರ್. ಘಸ್ತಿ, ಉಪನ್ಯಾಸಕರಾದ ಸುಪ್ರಿಯಾ ನಾಯಕ್ ಹಾಗೂ ಧನಶ್ರೀ ಜುಮ್ಮಾಯಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 