ರಾಷ್ಟ್ರೀಯ ಮತದಾರರ ದಿನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ

ರಾಷ್ಟ್ರೀಯ ಮತದಾರರ ದಿನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ Essay competition on the importance of National Voters' Day

ತಾಳಿಕೋಟೆ 06 : ಪಟ್ಟಣದ ಎಸ್‌.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರ ದಿನಾಚರಣೆಯ ಮಹತ್ವ ಕುರಿತು ತಾಳಿಕೋಟೆ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರಿ​‍್ಡಸಲಾಗಿತ್ತು. ಕ್ಷೇತ್ರ ಸಮನ್ವಯ ಅಧಿಕಾರಿ ಆರಿ​‍್ಬ.ದಮ್ಮೂರಮಠ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಿಆರ್ಸಿ ಕಾಶಿನಾಥ ಸಜ್ಜನ,ಸಿಆರ್ಸಿ ರಾಜಾಸಿಂಗ್ ವಿಜಾಪುರನಿರ್ಣಾಯಕರಾಗಿ ಲಿಂಗದಳ್ಳಿ ಸರಕಾರಿ ಪ್ರೌಢಶಾಲೆಯ ಕನ್ನಡ ವಿಷಯ ಶಿಕ್ಷಕ ಅಪ್ಪಾಸಾಹೇಬಗೌಡ ಮೂಲಿಮನಿ , ಬ.ಸಾಲವಾಡಗಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಿಮ್ಮಲಗಿ ಹಾಗೂ ಎಸ್‌.ಕೆ.ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಇದ್ದರು. ರಾಜಾಸಿಂಗ್ ವಿಜಾಪುರ ನಿರೂಪಿಸಿದರು, ಎಮ್‌.ಎಮ್‌.ಕಾಂಬಳೆ ಸ್ವಾಗತಿಸಿದರು.