ತಾಲೂಕು ಹೊರವಲಯದಲ್ಲಿ ಕೊರೊನಾ ತಪಾಸಣಾ ಕ್ಯಾಂಪ್ ಸ್ಥಾಪನೆ: ವಿಶ್ವನಾಥ
ಬಳ್ಳಾರಿ/ಹೊಸಪೇಟೆ,ಮಾ.27: ದುಡಿಮೆಗೆಂದು ವಲಸೆ ಹೋಗಿರುವವರು ಮರಳಿ ಬರುವ ಸಾಧ್ಯತೆಗಳಿದ್ದು ಅಂತಹ ವಲಸಿಗರ ತಪಾಸಣೆಗಾಗಿ ಸಾರಿಗೆ ಪ್ರಾದೇಶಿಕ ಕಚೇರಿಯ ಬಳಿಯಿರುವ ವಿದ್ಯಾಥರ್ಿ ವಸತಿ ನಿಲಯದಲ್ಲಿ ಕೊರೋನಾ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ ಮರಳಿ ಬಂದಿರುವವರಿಗೆ ತಪಾಸಣೆ ಮಾಡಲಾಗುವುದೆಂದು ತಹಶೀಲ್ದಾರ್ ವಿಶ್ವನಾಥ್ ಅವರು ತಿಳಿಸಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಬಳಿಕ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಅವರು ಮಾತನಾಡಿದರು.
ವಲಸಿಗರನ್ನು ಕರೆತರುವ ಲಾರಿಗಳನ್ನು ತಡೆದು ಎಲ್ಲಾ ಪ್ರಯಾಣಿಕರನ್ನು ತಪಾಸಣಾ ಕೇಂದ್ರದಲ್ಲಿ ತಪಾಸಣೆ ನಡೆಸಿ ವರದಿಯನ್ನು ನೀಡಬೇಕು. ತಪಾಸಣಾ ಕೇಂದ್ರ ಹತ್ತಿರದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಗ್ರಾಮ ಮಟ್ಟದಲ್ಲಿ ಕೊರೋನಾ ವೈರಸ್ ನಿಯಂತ್ರಣ ಸಲುವಾಗಿ ಕಾರ್ಯನಿರ್ವಹಿಸುವ ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಮಂಜಾಗ್ರತೆಯಾಗಿ ತಾವುಗಳು ಸ್ವಚ್ಚತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಗೃಹಬಂಧನಕ್ಕೆ ಒಳಗಾಗಿರುವವರನ್ನು ಭೇಟಿ ಮಾಡುವವರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಬೇಕು. ಗ್ರಾಮಗಳಿಗೆ ಆಗಮಿಸುವವರ ಮಾಹಿತಿಗಳನ್ನು ಪಡೆದು ಸ್ಥಳೀಯ ವೈದ್ಯಾಧಿಕಾರಿಗಳಿಗೆ ತಿಳಿಸಬೇಕು. ಪ್ರತಿದಿನ 3 ಬಾರಿ ಸ್ಥಳೀಯ ಪ್ರದೇಶಗಳಿಗೆ ಭೇಟಿ ನೀಡಬೇಕು ಜೊತೆಗೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಟಾಸ್ಕ್ ಫೋಸರ್್ ಸಮಿತಿ ಸಭೆಯನ್ನು ನಡೆಸಿ ಮಾಹಿತಿಯನ್ನು ತಾಲೂಕು ಆಡಳಿತಕ್ಕೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಕಂಪ್ಲಿ ತಹಶೀಲ್ದಾರ್ ಎಂ.ರೇಣುಕಾ, ಹಂಪಿ ಪ್ರಾಧಿಕಾರದ ಆಯುಕ್ತರಾದ ಪಿ.ಎನ್.ಲೋಕೇಶ್ ಸೇರಿದಂತೆ ಗ್ರಾಮಲೆಕ್ಕಾಧಿಕಾರಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 