ಮಾನಸಿಕ ಅಸ್ವಸ್ಥತೆ ಹೊಂದಿರುವ ನಿರಾಶ್ರಿತರ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಸ್ಥಾಪನೆ
Establishment of an emergency care and recovery center for refugees with mental illness
ಗದಗ 21 : ಗದಗ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥತೆ ಹೊಂದಿರುವ ನಿರಾಶ್ರಿತರಿಗೆ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರವನ್ನು ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ ಮಲ್ಲಸಮುದ್ರ ಗದಗದಲ್ಲಿ ಕೊಠಡಿ ಸಂಖ್ಯೆ: 232ರಲ್ಲಿ ಸ್ಥಾಪನೆಗೊಂಡಿದೆ. ಇದೊಂದು ಕರ್ನಾಟಕ ಸರ್ಕಾರ ಹಾಗೂ ನಿಮ್ಹಾನ್ಸ್ ಸಂಸ್ಥೆ ಆಲದಮರ ಫೌಂಡೇಶನ್, ಸಾರಥಿ ಸಂಸ್ಥೆ ಹಿರೇಹಂದಿಗೋಳ, ಗದಗ ಇವರ ಸಹಯೋಗದೊಂದಿಗೆ ಉಚಿತವಾಗಿ ಮಾನಸಿಕವಾಗಿ ಬಳಲುತ್ತಿರುವ ಬೀದಿಗಳಲ್ಲಿ ಗುರಿಯಿಲ್ಲದೆ ಅಲೆದಾಡುತ್ತಿರುವ ನಿರಾಶ್ರಿತರಿಗಾಗಿ ತುರ್ತುಚಿಕಿತ್ಸೆಯನ್ನು ಹಾಗೂ ಅಸ್ವಸ್ಥತೆಗೊಂಡಿರುವಂತಹ ರೋಗಿಗಳಿಗಾಗಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಮನೋವೈದ್ಯರಿಂದ ನೀಡಲಾಗುವುದು.
ಮತ್ತು ಗುಣಮುಖವಾಗುವರೆಗೂ ಉಚಿತ ಊಟ ಹಾಗೂ ಆರೈಕೆ ಓಷದೋಪಚಾರವನ್ನು ನೀಡಲಾಗುವುದು ಗುಣಮುಖ ಹೊಂದಿದವರನ್ನು ವಿಳಾಸ ಹಾಗೂ ಸಂಬಂಧಿಕರ ಮಾಹಿತಿಯನ್ನು ಪಡೆದು ಅವರಲ್ಲಿ ತಲುಪಲು ನೇರವಾಗುವುದಕ್ಕೆ ಈ ಕೇಂದ್ರ ಸಹಾಯವನ್ನು ಮಾಡಲಾಗುವುದು. ಗದಗ ಜಿಲ್ಲೆಯಲ್ಲಿ ತುರ್ತು ಚಿಕಿತ್ಸೆ ಹಾಗೂ ಆರೈಕೆ ಕೇಂದ್ರ ಸ್ಥಾಪನೆಗೊಂಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿಗಳು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 