ಪ್ರತಿ ಸೋಮವಾರ ತೆರಿಗೆ ಪಾವತಿ ದಿನ ಆಚರಣೆ: ಭೀಮಾಶಂಕರ ಕನ್ನೂರ
Every Monday is a tax payment day: Bhimashankar Kannur
ಇಂಡಿ 18: ಪ್ರತಿ ಗ್ರಾಮ ಮಟ್ಟದಲ್ಲಿ ಕರ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಎಂದು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಹೇಳಿದರು.
ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಜಾಥಾ, ಟಾಂ ಟಾಂ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಿ, ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಡಾ. ಭೀಮಾಶಂಕರ ಕನ್ನೂರ ಅವರು ಸೂಚನೆ ನೀಡಿದರು.
ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಇಂದು ಗುರುವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕರ ವಸೂಲಿಗಾರರ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲಿವರೆಗೂ ಶೇ. 11.75 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಗ್ರಾಮ ಪಂಚಾಯಿತಿವಾರು ಪ್ರಗತಿಗೆ ಹೋಲಿಸಿದಾಗ ಖೇಡಗಿ, ಹಡಲಸಂಗ, ಮೀರಗಿ, ಹಿರೇ ಬೇವನೂರ ಮತ್ತು ನಾದ ಕೇಡಿ ಪಂಚಾಯಿತಿಗಳಲ್ಲಿ ತುಂಬಾ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಆದ್ದರಿಂದ ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕ್ರಮಗಳ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕು. ಹಾಗೆಯೇ ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ, ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡಲು ಸೂಚನೆ ನೀಡಿದ ಅವರು, ಇನ್ನೂ ಒಂದು ತಿಂಗಳೊಳಗೆ ಕಡ್ಡಾಯವಾಗಿ ಶೇ.100 ರಷ್ಟು ಕರವಸೂಲಾತಿಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಕರ ವಸೂಲಿ ಮಾಡಿದ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬಿಲ್ ಕಲೆಕ್ಟರ್ಗಳನ್ನು ತಾಲೂಕ ಪಂಚಾಯತನಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಕರ ವಸೂಲಾತಿಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಪಿಡಿಒ ಹಾಗೂ ಬಿಲ್ ಕಲೆಕ್ಟರ್ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.
ಸಹಾಯಕ ನಿರ್ದೇಶಕರು (ಪಂ ರಾ) ಪ್ರಕಾಶ ರಾಠೋಡ ಮಾತನಾಡಿ, ಈ ಸಲ ತಾಲೂಕಿನ ಎಲ್ಲ ಗ್ರಾಪಂಗಳೂ ಪೂರ್ಣ ಪ್ರಮಾಣದ ಕರ ವಸೂಲಿಗೆ ಪ್ರಯತ್ನಿಸಿ ಗ್ರಾಪಂಗಳಲ್ಲಿ ಪ್ರತಿ ಸೋಮವಾರ ಆಯೋಜಿಸುವ ತೆರಿಗೆ ಸಂಗ್ರಹ ಅಭಿಯಾನದ ಯಶಸ್ಸಿಗೆ ಸಹಕರಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಯೋಜನಾಧಿಕಾರಿ ನಂದೀಪ ರಾಠೋಡ, ವ್ಯವಸ್ಥಾಪಕ ಮುರುಗೇಶ ನಾರಾಯಣಪುರ, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು , ಗ್ರೇಡ್ 1ಮತ್ತು 2 ಹಾಗೂ ಬಿಲ್ಕಲೇಕ್ಟರಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 