ಕನ್ನಡ ಉಳಿಸಿ ಬೆಳೆಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ: ದೇಸಾಯಿ
ರಾಮದುರ್ಗ 04: ಕಿವಿಗೆ ಇಂಪು ಕೊಡುವ ಭಾಷೆ ಕನ್ನಡ, ಕನ್ನಡದಂತಹ ಭಾಷೆ ಬೇರೊಂದಿಲ್ಲ. ಪ್ರತಿ ಮನೆಯಲ್ಲಿ ಕನ್ನಡ ಜೋತಿಯನ್ನ ಬೆಳಗಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವೆಂದು ಸಾಹಿತಿ ಸುರೇಶ ದೇಸಾಯಿ ಹೇಳಿದರು.
ಪಟ್ಟಣದ ಸಿ.ಡಿ. ಹಲ್ಯಾಳ ಪ್ರೌಢ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ ಕನರ್ಾಟಕ ರಾಜೋತ್ಸವ ಹಾಗೂ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಇಂಗ್ಲೀಷ್ ಭಾಷೆಯ ಬಗೆಗೆ ವ್ಯಾಮೋಹ ಅತಿಯಾಗುತ್ತಿದ್ದು, ಮನೆಯಲ್ಲಿ ನಿತ್ಯ ಕನ್ನಡ ಭಾಷೆ ಬಳಕೆ ಮಾಡಿ, ತಾಯಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕೆಂದು ತಿಳಿಸಿದರು.
ನವೆಂಬರ 1 ರಂದು ಮಾತ್ರ ಕನ್ನಡ ಪ್ರೇಮವನ್ನು ತೋರದೆ ಪ್ರತಿದಿನವೂ ತಮ್ಮ ಮನೆಯಲ್ಲಿ ತಮ್ಮ ಮಕ್ಕಳಿಗೆ ಕನ್ನಡದಲ್ಲಿ ಶಿಕ್ಷಣ ಕೊಡಿಸುವುದರ ಜೊತೆಗೆ ವ್ಯವಹಾರಿಕ ಬಾಷೆಯನ್ನಾಗಿ ಬಳಸುವ ಮೂಲಕ ಪ್ರತಿ ಮನೆ ಮನೆಯಲ್ಲಿ ಕನ್ನಡ ಬಳಸಿ, ಬೆಳೆಸಿ ಉಳಿಸಬೇಕಿದೆ ಎಂದರು.
ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಟಿ, ದಾಮೋದರ, ಮುಖ್ಯೋಪಾಧ್ಯಾಯ ವಿ.ಬಿ. ಜಂಬಗಿ, ಪತ್ರಕರ್ತ ಪವನ ದೇಶಪಾಂಡೆ ಸೇರಿದಂತೆ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಇತರರಿದ್ದರು.
ವಿ.ಜಿ. ನಾಗರೆಡ್ಡಿ ಸ್ವಾಗತಿಸಿ, ನಿರೂಪಿಸಿದರು. ಎಂ.ವೈ. ಪೂಜಾರ ವಂದಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 