ಅಪೂರ್ಣ ಕಟ್ಟಡ ಪೂರ್ಣಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ-ಪಟೇಲ್
Everyone's cooperation is needed to complete the unfinished building - Patel
ಕೊಪ್ಪಳ 16: ಅಪೂರ್ಣಗೊಂಡಿರುವ ಮಸೀದಿ ಕಟ್ಟಡ ಪೂರ್ಣಗೊಳಿಸಿ ಇಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಹಾಗೂ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಅಭಿಪ್ರಾಯಪಟ್ಟರು ,ಅವರು ಶನಿವಾರ ನಗರದ ಕಿನ್ನಾಳ ರಸ್ತೆ ಯಲ್ಲಿರುವ ಖಬರ್ ಸ್ಥಾನ ಆಡಳಿತ ಮಂಡಳಿ ಸಮಿತಿ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಇಲಾಖೆಯ ಅನುದಾನ ಪಡೆಯಲು ಸಂಬಂಧಿಸಿದ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ರವರಿಗೆ ಮತ್ತು ಸ್ಥಳೀಯ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ರವರಿಗೆ ಮನವರಿಕೆ ಮಾಡಿ ಅವರಿಂದ ವಿಶೇಷ ಅನುದಾನ ಪಡೆದು ಆದಷ್ಟು ಬೇಗನೆ ಅಪೂರ್ಣಗೊಂಡಿರುವ ಮಸೀದಿ ಕಟ್ಟಡ ಪೂರ್ಣಗೊಳಿಸಿ ಬಳಿಕ ಇಲ್ಲಿ ಕಾಂಪೌಂಡ್ ಗೋಡೆಗೆ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಅಭಿವೃದ್ದಿ ಪಡಿಸಲು ಎಲ್ಲರೂ ಶ್ರಮಿಸೋಣ ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಅದರ ತಕ್ಕಂತೆ ನಾವೆಲ್ಲರೂ ಕಾರ್ಯ ಮಾಡೋಣ ಶ್ರಮಿಸೋಣ ಎಂದು ಸಮಾಜದ ಹಿರಿಯ ಮುಖಂಡ ಹಾಗೂ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು, ಸಭೆಯಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರು ಹಾಗೂ ಕೊಪ್ಪಳ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ ರವರು ವಹಿಸಿದ್ದರು, ಸದರಿ ಸಭೆಯಲ್ಲಿ ಎಂ ಮಾನ್ವಿ ಪಾಶಾ, ಖಾದರ್ ಸಾಬ್ ಕುದುರೆಮೋತಿ, ಮುನೀರ್ ಸಿದ್ದಿಕೀ ,ಆದಿಲ್ ಪಟೇಲ್ ಸೇರಿದಂತೆ ಗೌಸ್ ಸಾಬ್ ಸರದಾರ ಅಲ್ಲದೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 