ಪ್ರತಿಯೊಬ್ಬರಲ್ಲೂ ಪ್ರತಿಭೆ ಅಡಗಿದೆ: ಡಾ. ಸಂತೋಷ ಜಯಗೌಡರ
Everyone has hidden talent: Dr. Santosh Jayagowda
ಬೆಳಗಾವಿ 26: ಪ್ರಕೃತಿಯಲ್ಲಿ ಜನ್ಮ ತಾಳಿದ ಪ್ರತಿಯೊಬ್ಬರಲ್ಲೂ ಪ್ರತಿಭೆ ಆಡಗಿದ್ದು ಆ ಪ್ರತಿಭೆಯನ್ನು ಗುರುತಿಸಿ ಹೊರ ತರುವ ವೇದಿಕೆ ನಿರ್ಮಾಣ ಮಾಡುವಲ್ಲಿ ಪಾಲಕರು, ಶಿಕ್ಷಕರು ಹಾಗೂ ಸಮಾಜ ಪ್ರಯತ್ನಿಸಬೇಕೆಂದು ಜಿಎಸ್ಎಸ್ ಸ್ನಾತಕೋತ್ತರ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂತೋಷ ಜಯಗೌಡರ ಅಭಿಪ್ರಾಯಪಟ್ಟರು.
ಅವರು ಇಂದು ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ. ಸಂಬರಗಿಮಠ ಸಭಾಗ್ರಹದಲ್ಲಿ ಸಿದ್ಧರಾಮೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕೆಯೆಂಬುದು ಕೇವಲ ಅಂಕ ಆಧಾರಿತವಾಗದೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಸಾವಿರ ಬಾರಿ ಪ್ರಯೋಗದಲ್ಲಿ ವಿಫಲನಾದರೂ ಧೃತಿಗೆಡದೆ ಶ್ರೇಷ್ಠ ಸಾಧನೆ ಮಾಡಿದ ಥಾಮಸ್ ಅಲ್ವಾ ಎಡಿಸನ್ ವಿಜ್ಞಾನಿಯಂತೆ ಸೋಲು, ಗೆಲುವುಗಳು ಮನುಷ್ಯನ ಆ ಸಮಯದ ಪ್ರಯತ್ನವನ್ನು ಪ್ರತಿನಿಧಿಸಬಲ್ಲವೇ ಹೊರತು ಆತನ ನಿಜವಾದ ಸಾಮರ್ಥ್ಯವನ್ನಲ್ಲ ಎಂದರು.
ಇನ್ನೋರ್ವ ಅತಿಥಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಅಶೋಕ ಹುಲಗಬಾಳಿ ಮಾತನಾಡಿ ವಿದ್ಯಾರ್ಥಿಗಳು ಪರೀಕ್ಷೆಗೆ ಭಯಪಡದೇ ಅದನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸಬೇಕು. ಕೇವಲ ಪಠ್ಯಗಳಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ರಾಗಿರಬೇಕು. ಸಾಮಾಜಿಕ ಕಳಕಳಿ, ಪರಿಸರ ಪ್ರಜ್ಞೆ, ಪರೋಪಕಾರ, ದೇಶಪ್ರೇಮ ಮುಂತಾದ ಶ್ರೇಷ್ಠ ಮಾನವೀಯ ಗುಣಗಳನ್ನು ಬಾಲ್ಯದಲ್ಲೇ ಅಳವಡಿಸಿಕೊಳ್ಳಬೇಕು ಎಂದರು. ವೇದಿಕೆಯ ಮೇಲೆ ಶಾಲೆಯ ಪ್ರಾಚಾರ್ಯೆ ಪೂಜಾ ನಾಯಕ, ಸಂಯೋಜಕ ರಾಜಶೇಖರ ಪಾಟೀಲ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 