ದೇಶದ ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರನ್ನು ಸದುಪಯೋಗ ಮಾಡಿಕೊಳ್ಳಿ: ಐಹೊಳೆ
Everyone in the country should make good use of clean drinking water: Aihole
ರಾಯಬಾಗ 28: ದೇಶದ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸು ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ ಮೀಷನ ಯೋಜನೆ ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ರಾಯಬಾಗ ಗ್ರಾಮೀಣ ಭಾಗದ ಆನೆಬಾಯಿಕೋಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಜೆಜೆಎಮ್ ಯೋಜನೆಯಡಿ ಮಂಜೂರಾದ 2 ಕೋಟಿ 54 ಲಕ್ಷ ರೂ. ಅನುದಾನದಲ್ಲಿ 966 ಮನೆಗಳಿಗೆ ನಳ ಸಂಪರ್ಕ, 5 ಮೇಲ್ಮಟ್ಟದ ಜಲಸಂಗ್ರಾಲಯ ಕಾಮಗಾರಿ ಹಾಗೂ ಭಿರಡಿ ಗ್ರಾಮದಲ್ಲಿ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಮಂಜೂರಾದ 25 ಲಕ್ಷ ರೂ. ಅನುದಾನದಲ್ಲಿ ಪ.ಜಾತಿ ಕಾಲೋನಿಯ ಭಿರಡಿ-ಜಲಾಲಪೂರ ರಸ್ತೆಯಿಂದ ರಾಜು ಮೈಶಾಳೆ ತೋಟದ ವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಪ್ರಮುಖವಾಗಿ ನೀರಿನ ಸೌಕರ್ಯ ಮತ್ತು ರಸ್ತೆಗಳನ್ನು ಸುಧಾರಿಸುವುದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಎಇಇ ಸುಭಾಷ ಭಜಂತ್ರಿ, ಜೆಇ ಲೋಹಿತ ಕಾಂಬಳೆ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಮಹಾದೇವ ಬೊರಗಾಂವೆ, ಶ್ರೀಧರ ಕುಡಚೆ, ಬಾದಶಾ ಡಾಂಗೆ, ಮಜ್ಜಿದ ಡಾಂಗೆ, ವಸಂತ ಕಾಂಬಳೆ, ಸಿದ್ದಪ್ಪ ಪುಜೇರಿ, ನಿಂಗಪ್ಪ ಪೂಜೇರಿ, ಮುರಗೇಂದ್ರ ನಿಶಾನಂದಾರ, ಕೇಶವ ಹವಾಲ್ದಾರ, ಸುಹಾಸ ಪುಜೇರಿ, ವಸಂತ ನಿಶಾನದಾರ, ಶಂಕರ ಗಂಗನ್ನವರ, ಸುರೇಶ ದೇವಋಷಿ, ಮಧುಕರ ಕಾಂಬಳೆ, ಕೆಂಪಣ್ಣ ಮೈಶಾಳೆ, ಶಂಕರ ನಿಡವಣಿ, ಸದಾಶಿವ ನಿಡವಣಿ, ಗೋಪಾಲ ಕೋಚೆರಿ, ಗೋಪಾಲ ನಿಡಗುಂದಿ, ರಂಜಾನ ಮಕಾಂದಾರ, ಬಸಪ್ಪ ಖಿಲಾರೆ, ಅಝಾದ ಡಾಂಗೆ, ರಮೇಶ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 