ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕು
ಲೋಕದರ್ಶನ ವರದಿ
ರಾಯಬಾಗ 25: ಪ.ಜಾತಿ ಕಾಲಿನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶುಕ್ರವಾರ ತಾಲೂಕಿನ ಭಿರಡಿ ಗ್ರಾಮದ ಮಾತಂಗಿಗಲ್ಲಿ ಮತ್ತು ಅಂಬೇಡ್ಕರ್ ಗಲ್ಲಿಗಳಲ್ಲಿ ಜಿ.ಪಂ. ಇಲಾಖೆಯ ಮಾದರಿ ಗ್ರಾಮ ಯೋಜನೆಯಡಿ ರೂ.75 ಲಕ್ಷರೂ ವೆಚ್ಚದಲ್ಲಿ ಪ್ಲೇವರ್ ಬ್ಲಾಕ್, ಸಿಸಿ ರಸ್ತೆ, ಚರಂಡಿ, ಹೈಮಾಸ್ ವಿದ್ಯುತ್ ಬಲ್ಬ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದಲ್ಲಿ ಪ್ರವಾಹ ಮತ್ತು ಮಳೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತರಿಗೆ ಸರಕಾರದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಯತ್ನಿಸುವುದಾಗಿ ಹೇಳಿದರು. ತಾ.ಪಂ.ಸದಸ್ಯ ಶ್ರೀಧರ ಕುಡಚೆ, ಮಹಾದೇವ ಬೊರಗಾಂವೆ, ಸದಾನಂದ ಹಳಿಂಗಳಿ, ಸದಾಶಿವ ಘೋರ್ಪಡೆ, ರಾಮು ನಿಶಾನಂದಾರ, ಗ್ರಾ.ಪಂ.ಅಧ್ಯಕ್ಷ ಮುರಘೇಂದ್ರ ನಿಶಾನಂದಾರ, ಸುಭಾಷ ನಡೋಣಿ, ಬಸವರಾಜ ಮೇತ್ರಿ, ಕೆಂಪಣ್ಣ ಮೈಶಾಳೆ, ಸುಭಾಷ ಬನಗೆ, ಕಲ್ಮೇಶ ನಡವಣಿ, ನಿಂಗಣ್ಣ ಮಿರ್ಜೆ, ಶಿವು ಮಗದುಮ್ಮ ಸೇರಿದಂತೆಗ್ರಾಮಸ್ಥರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 