ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ
Everyone should develop the habit of reading: M.L. Yandravi
ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು: ಎಂ.ಎಲ್.ಯಂಡ್ರಾವಿ
ಬೆಟಗೇರಿ 24:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಂ.ಎಲ್.ಯಂಡ್ರಾವಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.24ರಂದು ನಡೆದ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜ್ಞಾನ ಸಂಪತ್ತಿಗಿಂತ ಇನ್ನೂಂದು ಸಂಪತ್ತಿಲ್ಲಾ, ನಾವು ಕಷ್ಟಪಟ್ಟು ಸಂಪಾದಿಸಿದ ಆಸ್ತಿ, ಅಂತಸ್ತು ನಶಿಸಿ ಹೋಗಬಹುದು, ಜ್ಞಾನ ಎಂದು ನಶಿಸಿ ಹೋಗುವುದಿಲ್ಲಾ, ವಿದ್ಯಾರ್ಥಿಗಳು ಶಾಲಾ ಬಿಡುವಿನ ವೇಳೆಯಲ್ಲಿ ಉತ್ತಮ ಪುಸ್ತಕಗಳು ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕಗಳನ್ನು ಓದಬೇಕು ಎಂದು ಪಿಡಿಒ ಎಂ.ಎಲ್.ಯಂಡ್ರಾವಿ ಅಭಿಪ್ರಾಯಿಸಿದರು.
ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿ, ಓದುವ ಬೆಳಕು ಕಾರ್ಯಕ್ರಮದ ವಿವಿಧ ವಿಷಯಗಳನ್ನು ಶಾಲಾ ಮಕ್ಕಳಿಗೆ ತಿಳಿಸಿದರು.
ರಾಮಣ್ಣ ನೀಲಣ್ಣವರ, ವೈ.ಸಿ.ಶೀಗಿಹಳ್ಳಿ, ಸಿದ್ಧೇಶ್ವರ ಕುರಬೇಟ, ವಿಶ್ವನಾಥ ಶೀಗಿಹಳ್ಳಿ, ತುಕಾರಾಮ ಕುರಿ, ಸುರೇಶ ಬಾಣಸಿ, ಈರಣ್ಣ ದಂಡಿನ, ಮಣಿಕಂಠ ಐದುಡ್ಡಿ, ಗ್ರಾಪಂ ಸಿಬ್ಬಂದಿ, ಗಣ್ಯರು, ಶಿಕ್ಷಣ ಪ್ರೇಮಿಗಳು, ಶಾಲಾ ಮಕ್ಕಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 